ಹೊಸಪೇಟೆ ಗ್ರಾಮದಿಂದ ಶರತ್, ಭರತ್ ಮತ್ತು ಮೋಹನ್ ಮೂವರು ಕಾರಿನಲ್ಲಿ ಬಿಳಚೇನಹಳ್ಳಿ ಅರಣ್ಯ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಿನಿಂದ ಬಂದ ಆನೆ, ಕಾರಿನ ಮೇಲೆ ದಾಳಿ ಮಾಡಿದೆ. ಈ ಪೈಕಿ ಭರತ್ ಗೆ ತೀವ್ರ ಗಾಯಗಳಾಗಿದ್ದು, ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನೆ ದಾಳಿಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.