ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ದಾಳಿ- ಇಬ್ಬರಿಗೆ ಗಾಯ

Last Updated 17 ಅಕ್ಟೋಬರ್ 2020, 5:51 IST
ಅಕ್ಷರ ಗಾತ್ರ

ಕಡೂರು: ಕಾರಿನ ಮೇ‌ಲೆ ಒಂಟಿ ಸಲಗವೊಂದು ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡ ಘಟನೆ ತಾಲ್ಲೂಕಿನ ಬಿಳಚೇನಹಳ್ಳಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಹೊಸಪೇಟೆ ಗ್ರಾಮದಿಂದ ಶರತ್, ಭರತ್ ಮತ್ತು ಮೋಹನ್ ಮೂವರು ಕಾರಿನಲ್ಲಿ ಬಿಳಚೇನಹಳ್ಳಿ ಅರಣ್ಯ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಿನಿಂದ ಬಂದ ಆನೆ, ಕಾರಿನ ಮೇಲೆ ದಾಳಿ ಮಾಡಿದೆ. ಈ ಪೈಕಿ ಭರತ್ ಗೆ ತೀವ್ರ ಗಾಯಗಳಾಗಿದ್ದು, ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆನೆ ದಾಳಿಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಸಖರಾಯಪಟ್ಟಣ ಪೊಲೀಸರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರದಿಂದಲೇ ಸಖರಾಯ ಪಟ್ಟಣ ಪೊಲೀಸರು ಆನೆಯೊಂದು ಓಡಾಡುತ್ತಿದೆ ಎಂಬ ಮಾಹಿತಿ ಮೇರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT