ಬೆಳೆ ಹಾನಿ ಪರಿಹಾರಕ್ಕೆ ಒತ್ತಾಯ: ಸಬ್ಲಿ, ಚಕ್ಕೋಡು ಹಾಗೂ ಅತ್ತಿಗೆರೆ ಗ್ರಾಮದ ಕಾಫಿ ತೋಟದಲ್ಲಿ ಮೂರು ಕಾಡಾನೆ ಹಿಂಡು ಅಡ್ಡಾದಿಡ್ಡಿ ಓಡಾಡಿ ಅಪಾರ ಬೆಳೆ ಹಾನಿ ಸಂಭವಿಸಿದೆ. ಕಾಡಾನೆಯಿಂದ ರೈತರು ಬೆಳೆ ಕಳೆದುಕೊಂಡು ನಷ್ಟ ಅನುಭವಿಸುತ್ತಿದ್ದಾರೆ. ಬೆಳೆ ಹಾನಿಯಾದ ರೈತರಿಗೆ ಪರಿಹಾರ ನೀಡಬೇಕು ಹಾಗೂ ಕಾಡಾನೆ ಹಿಂಡನ್ನು ಸ್ಥಳಾಂತರಿಸಬೇಕು ಎಂದು ಸಬ್ಲಿ ಭಾಗದ ಗ್ರಾಮಸ್ಥರು ಒತ್ತಾಯಿಸಿದ್ದಾರೆ.