ನಾಲ್ಕೈದು ದಿನಗಳಿಂದ ಮೂಲರ ಹಳ್ಳಿ, ಗುತ್ತಿ, ಹೆಸಗೋಡು, ಕೊಟ್ರಕೆರೆ, ತ್ರಿಪುರ, ಕೋಗಿಲೆ, ಭಿನ್ನಾಡಿ ಭಾಗ ಗಳಲ್ಲಿ ತಿರುಗಾಡುತ್ತಿರುವ ಮೂರು ಕಾಡಾನೆ ಗಳು, ಮಂಗಳವಾರ ನಸುಕಿನ ಜಾವ 3 ಗಂಟೆಯ ಸುಮಾರಿಗೆ ಮೂಲರಹಳ್ಳಿ ಗ್ರಾಮಕ್ಕೆ ಬಂದಿವೆ. ಗ್ರಾಮದ ನವೀನ್, ರವೀಶ್, ಸುಬ್ರಾಯಗೌಡ, ಲಕ್ಷ್ಮಣಗೌಡ, ರಘುರಾಂ, ಭೈರಪ್ಪಗೌಡ, ಕಿರಣ್, ಕೃಷ್ಣೇಗೌಡ ಸೇರಿದಂತೆ ಹಲವು ರೈತರ ಕಾಫಿ ತೋಟಗಳಲ್ಲಿ ತಿರುಗಾಡಿ ಅಪಾರ ಪ್ರಮಾಣದ ಕಾಫಿ ಗಿಡಗಳನ್ನು ಹಾನಿಗೊಳಿಸಿವೆ.