ಎಸ್ಟೇಟ್ನಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಆನಂದ ಪೂಜಾರಿ(56) ಅವರು ಭಾನುವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋಗುವಾಗ ಆನೆ ದಾಳಿ ನಡೆಸಿದೆ. ಮಂಗಳೂರಿನ ಆನಂದ ಪೂಜಾರಿ ಅವರು, 35 ವರ್ಷಗಳಿಂದ ಇದೇ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.
ಒಂದು ವರ್ಷದ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂವರು ಬಲಿಯಾಗಿದ್ದಾರೆ. ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.