<p><strong>ಬಾಳೆಹೊನ್ನೂರು(ಚಿಕ್ಕಮಗಳೂರು):</strong> ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ನಡೆಸುತ್ತಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.</p><p>ಬಾಳೆಹೊನ್ನೂರು, ಖಾಂಡ್ಯ, ಹುಯಿಗೇರೆ, ದೇವದಾನ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ನಡೆಸಲಾಗುತ್ತಿದೆ. ಮಲೆನಾಡು ಹಿತರಕ್ಷಣಾ ಸಮಿತಿ, ಖಾಂಡ್ಯ ನಾಗರಿಕ ರಕ್ಷಣಾ ವೇದಿಕೆ, ಮಲೆನಾಡು ಅಡಿಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. </p><p>ಬಾಳೆಹೊನ್ನೂರಿನಲ್ಲಿ ಶಾಲಾ- ಕಾಲೇಜುಗಳನ್ನು ಸ್ಥಳೀಯರು ಬಂದ್ ಮಾಡಿಸಿದ್ದಾರೆ. ವಾಹನ ಸಂಚಾರ ಸಂಚಾರವನ್ನೂ ಬಂದ್ ಮಾಡಲಾಗಿದೆ. ಇದರಿಂದ ಚಿಕ್ಕಮಗಳೂರಿನಿಂದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಸಂಪರ್ಕ ಕಡಿತಗೊಂಡಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ.</p>.<p>ನಾಲ್ಕು ದಿನಗಳ ಅಂತರದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಕೂಡಲೇ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.</p><p>ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ನೀಡಿದ್ದು, 'ಹುಯಿಗೇರೆ, ದೇವದಾನ, ಅಂಡವಾನಿ, ಬನ್ನೂರು ಕಸ್ಕೆಮನೆ, ನೇಮನಹಳ್ಳಿ, ಹಲಸೂರು ಸುತ್ತಮುತ್ತ ಪ್ರದೇಶಗಳಲ್ಲಿ ಕಾಡಾನೆಗಳು ಸಂಚರಿಸುತ್ತಿವೆ. ಇಬ್ಬರ ಸಾವಿಗೆ ಕಾರಣವಾಗಿರುವ ಎರಡು ಆನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p><p>ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ವನ್ಯಜೀವಿ ಪರಿಪಾಲಕರಿಗೆ ನಿರ್ದೇಶನ ನೀಡಿದ್ದು, ಅದರಂತೆ ಸಕ್ರೆಬೈಲು ಆನೆ ಬಿಡಾರದಿಂದ ಕುಮ್ಕಿ ಆನೆಗಳನ್ನು ಕರೆತಂದು ಎರಡು ಪುಂಡನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಇಂದಿನಿಂದಲೇ(ಸೋಮವಾರ) ಆರಂಭಿಸಲಾಗುವುದು ಎಂದು ವಿವರಿಸಿದ್ದಾರೆ.</p>.ಬಾಳೆಹೊನ್ನೂರು | ಪಟ್ಟಣದ ಬಳಿ ಕಾಣಿಸಿಕೊಂಡ ಕಾಡಾನೆ.ಬಾಳೆಹೊನ್ನೂರು: ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು(ಚಿಕ್ಕಮಗಳೂರು):</strong> ಕಾಡಾನೆ ಉಪಟಳ ನಿಯಂತ್ರಣಕ್ಕೆ ಒತ್ತಾಯಿಸಿ ಬಾಳೆಹೊನ್ನೂರು, ಖಾಂಡ್ಯದಲ್ಲಿ ಸ್ಥಳೀಯರು ಸೋಮವಾರ ಸ್ವಯಂ ಪ್ರೇರಿತ ಬಂದ್ ನಡೆಸುತ್ತಿದ್ದು, ಎರಡು ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಲು ಅರಣ್ಯ ಇಲಾಖೆ ನಿರ್ಧರಿಸಿದೆ.</p><p>ಬಾಳೆಹೊನ್ನೂರು, ಖಾಂಡ್ಯ, ಹುಯಿಗೇರೆ, ದೇವದಾನ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ನಡೆಸಲಾಗುತ್ತಿದೆ. ಮಲೆನಾಡು ಹಿತರಕ್ಷಣಾ ಸಮಿತಿ, ಖಾಂಡ್ಯ ನಾಗರಿಕ ರಕ್ಷಣಾ ವೇದಿಕೆ, ಮಲೆನಾಡು ಅಡಿಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. </p><p>ಬಾಳೆಹೊನ್ನೂರಿನಲ್ಲಿ ಶಾಲಾ- ಕಾಲೇಜುಗಳನ್ನು ಸ್ಥಳೀಯರು ಬಂದ್ ಮಾಡಿಸಿದ್ದಾರೆ. ವಾಹನ ಸಂಚಾರ ಸಂಚಾರವನ್ನೂ ಬಂದ್ ಮಾಡಲಾಗಿದೆ. ಇದರಿಂದ ಚಿಕ್ಕಮಗಳೂರಿನಿಂದ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಸಂಪರ್ಕ ಕಡಿತಗೊಂಡಿದೆ. ವಾಹನಗಳು ಸಾಲುಗಟ್ಟಿ ನಿಂತಿವೆ.</p>.<p>ನಾಲ್ಕು ದಿನಗಳ ಅಂತರದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಕೂಡಲೇ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.</p><p>ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ನೀಡಿದ್ದು, 'ಹುಯಿಗೇರೆ, ದೇವದಾನ, ಅಂಡವಾನಿ, ಬನ್ನೂರು ಕಸ್ಕೆಮನೆ, ನೇಮನಹಳ್ಳಿ, ಹಲಸೂರು ಸುತ್ತಮುತ್ತ ಪ್ರದೇಶಗಳಲ್ಲಿ ಕಾಡಾನೆಗಳು ಸಂಚರಿಸುತ್ತಿವೆ. ಇಬ್ಬರ ಸಾವಿಗೆ ಕಾರಣವಾಗಿರುವ ಎರಡು ಆನೆಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p><p>ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ವನ್ಯಜೀವಿ ಪರಿಪಾಲಕರಿಗೆ ನಿರ್ದೇಶನ ನೀಡಿದ್ದು, ಅದರಂತೆ ಸಕ್ರೆಬೈಲು ಆನೆ ಬಿಡಾರದಿಂದ ಕುಮ್ಕಿ ಆನೆಗಳನ್ನು ಕರೆತಂದು ಎರಡು ಪುಂಡನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಇಂದಿನಿಂದಲೇ(ಸೋಮವಾರ) ಆರಂಭಿಸಲಾಗುವುದು ಎಂದು ವಿವರಿಸಿದ್ದಾರೆ.</p>.ಬಾಳೆಹೊನ್ನೂರು | ಪಟ್ಟಣದ ಬಳಿ ಕಾಣಿಸಿಕೊಂಡ ಕಾಡಾನೆ.ಬಾಳೆಹೊನ್ನೂರು: ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>