ಮೂಲರಹಳ್ಳಿ, ಗುತ್ತಿ ಭಾಗಗಳಲ್ಲಿ ದಾಳಿ ನಡೆಸುತ್ತಿದ್ದ ಕಾಡಾನೆಗಳು, ಗುರುವಾರ ಊರುಬಗೆ ಪ್ರದೇಶಕ್ಕೂ ಕಾಲಿಟ್ಟಿದ್ದು, ಊರುಬಗೆ, ಸತ್ತಿಗನಹಳ್ಳಿ, ಹೊಸ್ಕೆರೆ, ಭೈರಾಪುರ, ಗೌಡಳ್ಳಿ ಭಾಗಗಳಲ್ಲಿ ಕಾಡಾನೆ ಭೀತಿ ಎದುರಾಗಿದೆ. ನಿರಂತರವಾಗಿ ಕಾಡಾನೆಗಳು ದಾಳಿ ಮಾಡುತ್ತಿರುವುದರಿಂದ ಕಾಫಿ ತೋಟಗಳಲ್ಲಿ ಚಟುವಟಿಕೆಗಳು ಸ್ತಬ್ಧವಾಗಿದ್ದು, ಕಾಫಿ ತೋಟಗಳಿಗೆ ತೆರಳಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.