<p><strong>ಚಿಕ್ಕಮಗಳೂರು</strong>: ಆನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಭಾನುವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಲೆನಾಡಿನ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ಥಳೀಯರು ಬಂದ್ ನಡೆಸಿದರು.</p><p>ಬಾಳೆಹೊನ್ನೂರು, ಜಯಪುರ, ಕಡಬಗೆರೆ, ಕೊಪ್ಪದಲ್ಲಿ ಅಂಗಡಿ ಮುಂಗಟ್ಟುಗಳು ಸೋಮವಾರ ಬೆಳಿಗ್ಗೆಯಿಂದ ಸಂಜೆ ತನಕ ಮುಚ್ಚಿದ್ದವು. ಶೃಂಗೇರಿ ಮತ್ತು ಎನ್.ಆರ್.ಪುರ ಪಟ್ಟಣದಲ್ಲೂ ಬೆಳಿಗ್ಗೆ ಬಂದ್ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಕೆಲ ಅಂಗಡಿಗಳು ತೆರೆದುಕೊಂಡವು.</p><p>ಬಾಳೆಹೊನ್ನೂರಿನಲ್ಲಿ ನೂರಾರು ರೈತರು ಮೌನ ಮೆರವಣಿಗೆ ನಡೆಸಿದರು. ನಂತರ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ವೃತ್ತದಲ್ಲಿ ನಿಂತಿದ್ದ ಪೊಲೀಸ್ ಬಸ್ಸಿಗೆ ಹೂವು ಚೆಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.</p><p>ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ₹50 ಲಕ್ಷ ಪರಿಹಾರ ನೀಡಬೇಕು. ಎಲ್ಲಾ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು. ಭಾನುವಾರ ನಡೆದ ಪ್ರತಿಭಟನೆ ವೇಳೆ ಅಮಾಯಕರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಅಲ್ಲದೇ ಹಲವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ಎಫ್ಐಆರ್ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಪ್ರತಿಭಟನಾಕಾರರ ಮೇಲೆ ಹಾಕಿರುವ ಎಫ್ಐಆರ್ ಸಂಬಂಧ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು. 9 ಜನರ ಹೆಸರು ಮತ್ತು 20 ಇತರರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸಿಕ್ಕ ಸಿಕ್ಕವರನ್ನು ಕರೆತಂದು ಹಿಂಸೆ ನೀಡಿದರೆ ಠಾಣೆ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p><p>ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಕ್ಷೇತ್ರ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗದ್ದೆಮನೆ ವಿಶ್ವನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p><strong>29 ಜನರ ವಿರುದ್ಧ ಎಫ್ಐಆರ್</strong></p><p>ಭಾನುವಾರ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆ ಶವದೊಂದಿಗೆ ನಡೆದ ಪ್ರತಿಭಟನೆಗೆ ಸಂಬಂಧಿಸಿ 29 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಸ್ತೆತಡೆ, ಕಲ್ಲು ತೂರಾಟ, ಪೊಲೀಸ್ ವಾಹನ ಉರುಳಿಸಲು ಯತ್ನ, ಕರ್ತವ್ಯಕ್ಕೆ ಅಡ್ಡಿ ಆರೋಪ ಹೊರಿಸಲಾಗಿದೆ.</p><p>ಸಬ್ ಇನ್ಸ್ಪೆಕ್ಟರ್ ಅಂಬರೀಶ್ ದೂರು ನೀಡಿದ್ದಾರೆ. ಹೊನ್ನೆಕೊಪ್ಪದ ಚಂದ್ರಶೇಖರ ರೈ, ಹೊಸಳ್ಳಿ ಅಭಿಷೇಕ್, ಕಡಬಗೆರೆ ಮಂಜಶೆಟ್ಟಿ, ಪ್ರವೀಣ್ ಖಾಂಡ್ಯ, ಕುಂಬರಗೋಡು ಆದರ್ಶ, ಹಳೆಹಳ್ಳಿ ಕಾರ್ತಿಕ್, ಕೂಸ್ಕಲ್ ಪುರುಷೋತ್ತಮ, ಮೂಡುಬಾಗಿಲು ಸಚಿನ್, ವರ್ಕಟ್ಟೆ ಧನಂಜಯ ಅವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. </p><p>‘ಕಲ್ಲುತೂರಾಟದ ಸಂದರ್ಭದಲ್ಲಿ ಡಿವೈಎಸ್ಪಿ, ಪಿಎಸ್ಐ ಮಧು, ಪೊಲೀಸ್ ಸಿಬ್ಬಂದಿ ರೇಖಾ, ಜಯರಾಮೇಗೌಡ, ಮಂಜುನಾಥ, ಭೀಮಸೇನ ಕಣಬೂರು, ಹನುಮಂತ ಗುಡದಿನ್ನಿ, ರಘುನಾಯ್ಕ, ಶಿವಾನಂದ ಇವರಿಗೆ ರಕ್ತ ಗಾಯಗಳಾಗಿವೆ’ ಎಂದು ನಮೂದಿಸಲಾಗಿದೆ. ಹ್ಯಾರಂಬಿಪುರದ ನಾಗೇಶಗೌಡ ತೋಟದಲ್ಲಿ ಕಾಡಾನೆ ತುಳಿತದಿಂದ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಗೆದ್ದಲಗಟ್ಟೆ ಕಾಮಯ್ಯನಟ್ಟಿ ಬೋರಮ್ಮ(45) ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಆನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಭಾನುವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಲೆನಾಡಿನ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ಥಳೀಯರು ಬಂದ್ ನಡೆಸಿದರು.</p><p>ಬಾಳೆಹೊನ್ನೂರು, ಜಯಪುರ, ಕಡಬಗೆರೆ, ಕೊಪ್ಪದಲ್ಲಿ ಅಂಗಡಿ ಮುಂಗಟ್ಟುಗಳು ಸೋಮವಾರ ಬೆಳಿಗ್ಗೆಯಿಂದ ಸಂಜೆ ತನಕ ಮುಚ್ಚಿದ್ದವು. ಶೃಂಗೇರಿ ಮತ್ತು ಎನ್.ಆರ್.ಪುರ ಪಟ್ಟಣದಲ್ಲೂ ಬೆಳಿಗ್ಗೆ ಬಂದ್ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಕೆಲ ಅಂಗಡಿಗಳು ತೆರೆದುಕೊಂಡವು.</p><p>ಬಾಳೆಹೊನ್ನೂರಿನಲ್ಲಿ ನೂರಾರು ರೈತರು ಮೌನ ಮೆರವಣಿಗೆ ನಡೆಸಿದರು. ನಂತರ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ವೃತ್ತದಲ್ಲಿ ನಿಂತಿದ್ದ ಪೊಲೀಸ್ ಬಸ್ಸಿಗೆ ಹೂವು ಚೆಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.</p><p>ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ₹50 ಲಕ್ಷ ಪರಿಹಾರ ನೀಡಬೇಕು. ಎಲ್ಲಾ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು. ಭಾನುವಾರ ನಡೆದ ಪ್ರತಿಭಟನೆ ವೇಳೆ ಅಮಾಯಕರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಅಲ್ಲದೇ ಹಲವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ಎಫ್ಐಆರ್ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಪ್ರತಿಭಟನಾಕಾರರ ಮೇಲೆ ಹಾಕಿರುವ ಎಫ್ಐಆರ್ ಸಂಬಂಧ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು. 9 ಜನರ ಹೆಸರು ಮತ್ತು 20 ಇತರರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸಿಕ್ಕ ಸಿಕ್ಕವರನ್ನು ಕರೆತಂದು ಹಿಂಸೆ ನೀಡಿದರೆ ಠಾಣೆ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p><p>ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಕ್ಷೇತ್ರ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗದ್ದೆಮನೆ ವಿಶ್ವನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<p><strong>29 ಜನರ ವಿರುದ್ಧ ಎಫ್ಐಆರ್</strong></p><p>ಭಾನುವಾರ ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆ ಶವದೊಂದಿಗೆ ನಡೆದ ಪ್ರತಿಭಟನೆಗೆ ಸಂಬಂಧಿಸಿ 29 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಸ್ತೆತಡೆ, ಕಲ್ಲು ತೂರಾಟ, ಪೊಲೀಸ್ ವಾಹನ ಉರುಳಿಸಲು ಯತ್ನ, ಕರ್ತವ್ಯಕ್ಕೆ ಅಡ್ಡಿ ಆರೋಪ ಹೊರಿಸಲಾಗಿದೆ.</p><p>ಸಬ್ ಇನ್ಸ್ಪೆಕ್ಟರ್ ಅಂಬರೀಶ್ ದೂರು ನೀಡಿದ್ದಾರೆ. ಹೊನ್ನೆಕೊಪ್ಪದ ಚಂದ್ರಶೇಖರ ರೈ, ಹೊಸಳ್ಳಿ ಅಭಿಷೇಕ್, ಕಡಬಗೆರೆ ಮಂಜಶೆಟ್ಟಿ, ಪ್ರವೀಣ್ ಖಾಂಡ್ಯ, ಕುಂಬರಗೋಡು ಆದರ್ಶ, ಹಳೆಹಳ್ಳಿ ಕಾರ್ತಿಕ್, ಕೂಸ್ಕಲ್ ಪುರುಷೋತ್ತಮ, ಮೂಡುಬಾಗಿಲು ಸಚಿನ್, ವರ್ಕಟ್ಟೆ ಧನಂಜಯ ಅವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. </p><p>‘ಕಲ್ಲುತೂರಾಟದ ಸಂದರ್ಭದಲ್ಲಿ ಡಿವೈಎಸ್ಪಿ, ಪಿಎಸ್ಐ ಮಧು, ಪೊಲೀಸ್ ಸಿಬ್ಬಂದಿ ರೇಖಾ, ಜಯರಾಮೇಗೌಡ, ಮಂಜುನಾಥ, ಭೀಮಸೇನ ಕಣಬೂರು, ಹನುಮಂತ ಗುಡದಿನ್ನಿ, ರಘುನಾಯ್ಕ, ಶಿವಾನಂದ ಇವರಿಗೆ ರಕ್ತ ಗಾಯಗಳಾಗಿವೆ’ ಎಂದು ನಮೂದಿಸಲಾಗಿದೆ. ಹ್ಯಾರಂಬಿಪುರದ ನಾಗೇಶಗೌಡ ತೋಟದಲ್ಲಿ ಕಾಡಾನೆ ತುಳಿತದಿಂದ ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಗೆದ್ದಲಗಟ್ಟೆ ಕಾಮಯ್ಯನಟ್ಟಿ ಬೋರಮ್ಮ(45) ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>