<p><strong>ಚಿಕ್ಕಮಗಳೂರು</strong>: ಆನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಭಾನುವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಲೆನಾಡಿನ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ಥಳೀಯರು ಬಂದ್ ನಡೆಸಿದರು.</p><p>ಬಾಳೆಹೊನ್ನೂರು, ಜಯಪುರ, ಕಡಬಗೆರೆ, ಕೊಪ್ಪದಲ್ಲಿ ಅಂಗಡಿ ಮುಂಗಟ್ಟುಗಳು ಸೋಮವಾರ ಬೆಳಿಗ್ಗೆಯಿಂದ ಸಂಜೆ ತನಕ ಮುಚ್ಚಿದ್ದವು. ಶೃಂಗೇರಿ ಮತ್ತು ಎನ್.ಆರ್.ಪುರ ಪಟ್ಟಣದಲ್ಲೂ ಬೆಳಿಗ್ಗೆ ಬಂದ್ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಕೆಲ ಅಂಗಡಿಗಳು ತೆರೆದುಕೊಂಡವು.</p><p>ಬಾಳೆಹೊನ್ನೂರಿನಲ್ಲಿ ನೂರಾರು ರೈತರು ಮೌನ ಮೆರವಣಿಗೆ ನಡೆಸಿದರು. ನಂತರ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ವೃತ್ತದಲ್ಲಿ ನಿಂತಿದ್ದ ಪೊಲೀಸ್ ಬಸ್ಸಿಗೆ ಹೂವು ಚೆಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.</p><p>ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ₹50 ಲಕ್ಷ ಪರಿಹಾರ ನೀಡಬೇಕು. ಎಲ್ಲಾ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು. ಭಾನುವಾರ ನಡೆದ ಪ್ರತಿಭಟನೆ ವೇಳೆ ಅಮಾಯಕರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಅಲ್ಲದೇ ಹಲವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ಎಫ್ಐಆರ್ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಪ್ರತಿಭಟನಾಕಾರರ ಮೇಲೆ ಹಾಕಿರುವ ಎಫ್ಐಆರ್ ಸಂಬಂಧ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು. 9 ಜನರ ಹೆಸರು ಮತ್ತು 20 ಇತರರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸಿಕ್ಕ ಸಿಕ್ಕವರನ್ನು ಕರೆತಂದು ಹಿಂಸೆ ನೀಡಿದರೆ ಠಾಣೆ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p><p>ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಕ್ಷೇತ್ರ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗದ್ದೆಮನೆ ವಿಶ್ವನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>
<p><strong>ಚಿಕ್ಕಮಗಳೂರು</strong>: ಆನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಭಾನುವಾರ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಮಲೆನಾಡಿನ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ಥಳೀಯರು ಬಂದ್ ನಡೆಸಿದರು.</p><p>ಬಾಳೆಹೊನ್ನೂರು, ಜಯಪುರ, ಕಡಬಗೆರೆ, ಕೊಪ್ಪದಲ್ಲಿ ಅಂಗಡಿ ಮುಂಗಟ್ಟುಗಳು ಸೋಮವಾರ ಬೆಳಿಗ್ಗೆಯಿಂದ ಸಂಜೆ ತನಕ ಮುಚ್ಚಿದ್ದವು. ಶೃಂಗೇರಿ ಮತ್ತು ಎನ್.ಆರ್.ಪುರ ಪಟ್ಟಣದಲ್ಲೂ ಬೆಳಿಗ್ಗೆ ಬಂದ್ ವಾತಾವರಣ ಇತ್ತು. ಮಧ್ಯಾಹ್ನದ ನಂತರ ಕೆಲ ಅಂಗಡಿಗಳು ತೆರೆದುಕೊಂಡವು.</p><p>ಬಾಳೆಹೊನ್ನೂರಿನಲ್ಲಿ ನೂರಾರು ರೈತರು ಮೌನ ಮೆರವಣಿಗೆ ನಡೆಸಿದರು. ನಂತರ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ವೃತ್ತದಲ್ಲಿ ನಿಂತಿದ್ದ ಪೊಲೀಸ್ ಬಸ್ಸಿಗೆ ಹೂವು ಚೆಲ್ಲಿ ವಿಶಿಷ್ಟವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.</p><p>ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ₹50 ಲಕ್ಷ ಪರಿಹಾರ ನೀಡಬೇಕು. ಎಲ್ಲಾ ಆನೆಗಳನ್ನು ಹಿಡಿದು ಸ್ಥಳಾಂತರ ಮಾಡಬೇಕು. ಭಾನುವಾರ ನಡೆದ ಪ್ರತಿಭಟನೆ ವೇಳೆ ಅಮಾಯಕರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಅಲ್ಲದೇ ಹಲವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿದ್ದಾರೆ. ಎಫ್ಐಆರ್ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p>.<p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ‘ಪ್ರತಿಭಟನಾಕಾರರ ಮೇಲೆ ಹಾಕಿರುವ ಎಫ್ಐಆರ್ ಸಂಬಂಧ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಬೇಕು. 9 ಜನರ ಹೆಸರು ಮತ್ತು 20 ಇತರರು ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಸಿಕ್ಕ ಸಿಕ್ಕವರನ್ನು ಕರೆತಂದು ಹಿಂಸೆ ನೀಡಿದರೆ ಠಾಣೆ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p><p>ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಕ್ಷೇತ್ರ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗದ್ದೆಮನೆ ವಿಶ್ವನಾಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>