ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಶೃಂಗೇರಿ | ಕಾಡಾನೆ ಹಾವಳಿ: ರೈಲ್ವೆ ಬ್ಯಾರಿಕೇಡ್‍ ಅಳವಡಿಸಲು ಒತ್ತಾಯ

‘ಕಾಡಾನೆ ಹಾವಳಿ ತಡೆಯಲು’ ಶೃಂಗೇರಿ ಅರಣ್ಯ ಇಲಾಖೆಯ ಎದುರು ಪ್ರತಿಭಟನೆ
Published : 4 ಸೆಪ್ಟೆಂಬರ್ 2025, 4:37 IST
Last Updated : 4 ಸೆಪ್ಟೆಂಬರ್ 2025, 4:37 IST
ಫಾಲೋ ಮಾಡಿ
Comments
ಶೃಂಗೇರಿಯ ಅರಣ್ಯ ಇಲಾಖೆಯ ಎದುರು ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಆಯೋಜಿಸಿದ್ದ ‘ಕಾಡಾನೆ ಹಾವಳಿ ತಡೆಯಬೇಕೆಂಬ’ ಪ್ರತಿಭಟನೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಇ ಮಾತನಾಡಿದರು
ಶೃಂಗೇರಿಯ ಅರಣ್ಯ ಇಲಾಖೆಯ ಎದುರು ಮಲೆನಾಡು ನಾಗರಿಕ ಹಕ್ಕುಗಳ ಹೋರಾಟ ಸಮಿತಿ ಆಯೋಜಿಸಿದ್ದ ‘ಕಾಡಾನೆ ಹಾವಳಿ ತಡೆಯಬೇಕೆಂಬ’ ಪ್ರತಿಭಟನೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಇ ಮಾತನಾಡಿದರು
ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ
‘ಕಾಡಾನೆ ಓಡಿಸುವ ಕೆಲಸವನ್ನು ನಮ್ಮ ಅಧಿಕಾರದ ಮಿತಿಯಲ್ಲಿ ಪ್ರಾಮಾಣಿಕವಾಗಿ ಮಾಡುತ್ತಿದ್ದೇವೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಆನೆಗಳು ಸಂಚರಿಸುವ ಪ್ರದೇಶದಲ್ಲಿ ತೋಟ ಮತ್ತು ಗದ್ದೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಮನೆಗೆ ಕಳಿಸುತ್ತಿದ್ದೇವೆ. ಸಾರ್ವಜನಿಕರಿಗೆ ಪ್ರತಿದಿನ ಆನೆ ಯಾವ ಭಾಗದಲ್ಲಿ ಸಂಚರಿಸುತ್ತಿದೆ ಎಂದು ಧ್ವನಿವರ್ಧಕದ ಮೂಲಕ ತಿಳಿಸಿದ್ದೇವೆ. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಆನೆ ಕಾರ್ಯ ಪಡೆಯವರು ಆನೆ ಸಂಚಾರದ ಚಲನವಲನದ ಬಗ್ಗೆ ಗಮನ ಹರಿಸಿದ್ದಾರೆ. ಕೂಡಲೇ ಕಾಡಾನೆಯನ್ನು ಓಡಿಸುತ್ತೇವೆ. ಕಾಡಾನೆಗಳನ್ನು ಗುಡ್ಡಗಾಡು ಪ್ರದೇಶದಲ್ಲಿ ಹಿಡಿಯುವುದು ಕಷ್ಟ. ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕುರಿತು ಸರ್ಕಾರಕ್ಕೆ ಇಲಾಖೆಯಿಂದ ಪ್ರಸ್ತಾವನೆ ನೀಡಲಾಗಿದೆ. ಕಾಡಾನೆಗಳನ್ನು ಹಿಡಿಯುವ ಕುರಿತು ವನ್ಯಜೀವಿ ವಿಭಾಗದ ಮೇಲಾಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇವೆ’ ಎಂದು ಕೊಪ್ಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಇ. ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT