<p><strong>ತರೀಕೆರೆ</strong>: ‘ಸಂವಿಧಾನದ ಆಶಯದಂತೆ ದೇಶದ ಪ್ರತಿಯೊಬ್ಬರೂ ಸಮಾನತೆ, ಭ್ರಾತೃತ್ವ, ಸಮಪಾಲು, ಸಮಬಾಳ್ವೆಯ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಉಪವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ಹೇಳಿದರು.</p>.<p>ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ನವಜೀವನ ಚಾರಿಟಬಲ್ ಸೇವಾಸಂಸ್ಥೆಯ ಆಶ್ರಯದಲ್ಲಿ ನಾಗರಿಕ ಹಕ್ಕು ರಕ್ಷಣಾ ಕಾಯ್ದೆ-1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಹಾಗೂ ಇತರೆ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ‘2024-25ರ ಬೀದಿ ನಾಟಕ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಯಾವ ಭಾಗದಲ್ಲಿ ದೌರ್ಜನ್ಯ ಮತ್ತು ಜಾತೀಯತೆಯ ಪ್ರಕರಣಗಳು ನಡೆದಿರುವುದನ್ನು ಗುರುತಿಸಿ ಸರ್ಕಾರ ಅಂತಹ ಸ್ಥಳಗಳಲ್ಲಿ ಜನಜಾಗೃತಿ ಮೂಡಿಸಲು ಬೀದಿ ನಾಟಕ, ಭಿತ್ತಿಪತ್ರ ಮೊದಲಾದವುಗಳ ಮೂಲಕ ಪ್ರಚುರಪಡಿಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಕಾನೂನಿನ ಮಹತ್ವ ತಿಳಿದುಕೊಳ್ಳಬೇಕು ಎಂದರು.</p>.<p>ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ದೇವೇಂದ್ರಪ್ಪ, ಪುರಸಭಾ ಮುಖ್ಯಾಧಿಕಾರಿ ಎಚ್. ಪ್ರಶಾಂತ್, ಸಮಾಜ ಕಲ್ಯಾಣ ಇಲಾಖಾ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿದರು.</p>.<p>ನವಜೀವನ ಚಾರಿಟಬಲ್ ಸೇವಾಸಂಸ್ಥೆಯ ಕಾರ್ಯದರ್ಶಿ ದರ್ಶನ್ ಅವರ ತಂಡದಿಂದ ಬೀದಿನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ‘ಸಂವಿಧಾನದ ಆಶಯದಂತೆ ದೇಶದ ಪ್ರತಿಯೊಬ್ಬರೂ ಸಮಾನತೆ, ಭ್ರಾತೃತ್ವ, ಸಮಪಾಲು, ಸಮಬಾಳ್ವೆಯ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಉಪವಿಭಾಗಾಧಿಕಾರಿ ಕೆ.ಜೆ. ಕಾಂತರಾಜ್ ಹೇಳಿದರು.</p>.<p>ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ನವಜೀವನ ಚಾರಿಟಬಲ್ ಸೇವಾಸಂಸ್ಥೆಯ ಆಶ್ರಯದಲ್ಲಿ ನಾಗರಿಕ ಹಕ್ಕು ರಕ್ಷಣಾ ಕಾಯ್ದೆ-1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಹಾಗೂ ಇತರೆ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ‘2024-25ರ ಬೀದಿ ನಾಟಕ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ ಯಾವ ಭಾಗದಲ್ಲಿ ದೌರ್ಜನ್ಯ ಮತ್ತು ಜಾತೀಯತೆಯ ಪ್ರಕರಣಗಳು ನಡೆದಿರುವುದನ್ನು ಗುರುತಿಸಿ ಸರ್ಕಾರ ಅಂತಹ ಸ್ಥಳಗಳಲ್ಲಿ ಜನಜಾಗೃತಿ ಮೂಡಿಸಲು ಬೀದಿ ನಾಟಕ, ಭಿತ್ತಿಪತ್ರ ಮೊದಲಾದವುಗಳ ಮೂಲಕ ಪ್ರಚುರಪಡಿಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಕಾನೂನಿನ ಮಹತ್ವ ತಿಳಿದುಕೊಳ್ಳಬೇಕು ಎಂದರು.</p>.<p>ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ದೇವೇಂದ್ರಪ್ಪ, ಪುರಸಭಾ ಮುಖ್ಯಾಧಿಕಾರಿ ಎಚ್. ಪ್ರಶಾಂತ್, ಸಮಾಜ ಕಲ್ಯಾಣ ಇಲಾಖಾ ಸಹಾಯಕ ನಿರ್ದೇಶಕ ಮಂಜುನಾಥ್ ಮಾತನಾಡಿದರು.</p>.<p>ನವಜೀವನ ಚಾರಿಟಬಲ್ ಸೇವಾಸಂಸ್ಥೆಯ ಕಾರ್ಯದರ್ಶಿ ದರ್ಶನ್ ಅವರ ತಂಡದಿಂದ ಬೀದಿನಾಟಕ ಪ್ರದರ್ಶಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>