<p><strong>ಬಾಳೆಹೊನ್ನೂರು:</strong> ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದ ಸೀಗೋಡು ಬಳಿಯ ಕಾಫಿ ಸಂಶೋಧನಾ ಕೇಂದ್ರದ (ಸಿಆರ್ಎಸ್) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ವರ್ಷ ಯಾವುದೇ ವಿದ್ಯಾರ್ಥಿಗಳು ದಾಖಲಾಗದ ಕಾರಣ ಮುಚ್ಚುವ ಹಂತ ತಲುಪಿದ್ದು, ಇತಿಹಾಸದ ಪುಟ ಸೇರಲಿದೆ.</p>.<p>1966ರಲ್ಲಿ ಆರಂಭಗೊಂಡ ಈ ಶಾಲೆಯಲ್ಲಿ 7 ಕೊಠಡಿಗಳು, ಒಂದು ಸುಸಜ್ಜಿತ ರಂಗಮಂದಿರ ಇದೆ. ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿ, ವಿವಿಧಡೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲಾಭಿವೃದ್ಧಿ ಸಮಿತಿಯ ಪ್ರಯತ್ನದಿಂದ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಐದು ಕಂಪ್ಯೂಟರ್, ಯುಪಿಎಸ್ ಅಳವಡಿಸಲಾಗಿದೆ. ಇಷ್ಟೆಲ್ಲಾ ಸೌಲಭ್ಯಗಳಿದ್ದರೂ ಸುತ್ತಲಿನ ವಿದ್ಯಾರ್ಥಿಗಳು ಇಲ್ಲಿನ ಶಾಲೆಗೆ ದಾಖಲಾಗುತ್ತಿಲ್ಲ.</p>.<p>ಶಾಲೆ ಉಳಿಸುವ ಸಲುವಾಗಿ ಸುತ್ತಲಿನ ಗಂಟೆನಾಯ್ಕ, ನೇತ್ರಕೊಂಡ, ಗುಂಡಿಖಾನ್ ಮುಂತಾದ ಕಡೆಗೆ ಶಿಕ್ಷಕರು ತೆರಳಿ ದಾಖಲಾತಿ ಅಭಿಯಾನ, ಸಭೆ ನಡೆಸಿದರೂ ಪ್ರಯೋಜನವಾಗಿಲ್ಲ. ಈ ಶೈಕ್ಷಣಿಕ ವರ್ಷದ ಆರಂಭದಲ್ಲಿ 6ನೇ ತರಗತಿಗೆ ಒಬ್ಬ ವಿದ್ಯಾರ್ಥಿನಿ ದಾಖಲಾಗಿದ್ದರು. ಆದರೆ, ಇದೀಗ ಆ ವಿದ್ಯಾರ್ಥಿನಿಯ ಪೋಷಕರೂ ಕೂಡ ಆಕೆಯನ್ನು ಬೇರೆ ಶಾಲೆಗೆ ಸೇರ್ಪಡೆಗೊಳಿಸಲು ಮುಂದಾಗಿದ್ದು ವರ್ಗಾವಣೆ ಪತ್ರಕ್ಕೆ ಕೋರಿಕೆ ಸಲ್ಲಿಸಿದ್ದಾರೆ.</p>.<p>‘ಈಗಾಗಲೇ ವಿದ್ಯಾರ್ಥಿಗಳ ಕೊರತೆಯಿಂದ ಹಿರೇಗದ್ದೆ ಗ್ರಾಮದ ತಲವಾನೆ, ಅರಳಿಕೊಪ್ಪದಲ್ಲಿನ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ಎಲ್ಲಾ ಸೌಲಭ್ಯಗಳನ್ನು ನೀಡಿದರೂ ಮಕ್ಕಳು ದಾಖಲಾಗುತ್ತಿಲ್ಲ’ ಎನ್ನುತ್ತಾರೆ ಕೊಗಳಿಯ ಪೋಷಕ ಪ್ರಭಾಕರ್.</p>.<p>ಶಾಲೆಯಲ್ಲಿ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರು ಶಿಕ್ಷಕರು ಹಾಗೂ ಒಬ್ಬರು ಬಿಸಿಯೂಟ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಇರುವ ಒಬ್ಬ ವಿದ್ಯಾರ್ಥಿನಿಗಾಗಿ ಈ ಮೂವರೂ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಆ ವಿದ್ಯಾರ್ಥಿನಿಯೂ ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವುದರಿಂದ ಮುಂದೇನು ಎಂಬ ಪ್ರಶ್ನೆ ಮೂಡಿದೆ.</p>.<p>‘ಪಕ್ಕದ ಅಂಗನವಾಡಿಯಲ್ಲೂ ಕೇವಲ ನಾಲ್ಕು ಮಕ್ಕಳಿದ್ದಾರೆ. ಇಲ್ಲಿರುವ ಖಾಸಗಿ ಶಾಲೆಗೆ ಎಲ್ಲರೂ ಮಕ್ಕಳನ್ನು ಸೇರಿಸುತ್ತಿರುವ ಕಾರಣ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಇಲ್ಲದಂತಾಗಿದೆ’ ಎನ್ನುತ್ತಾರೆ ಮುಖ್ಯ ಶಿಕ್ಷಕ ಶೇಖರಪ್ಪ.</p>.<p><strong>‘ಚರ್ಚಿಸಿ ನಿರ್ಧಾರ‘</strong></p><p> ‘ಜುಲೈ 15ರವರೆಗೆ ವಿದ್ಯಾರ್ಥಿಗಳನ್ನು ಶಾಲೆಗೆ ಹೊಸದಾಗಿ ದಾಖಲು ಮಾಡಿಕೊಳ್ಳಲು ಅವಕಾಶವಿದೆ. ಈ ಶಾಲೆಯ ಒಬ್ಬರು ಶಿಕ್ಷಕರನ್ನು ಬೇರೆಡೆಗೆ ನಿಯೋಜಿಸಲು ಚಿಂತಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿದ್ದಲ್ಲಿ ಮುಂದಿನ ಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಕೊಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ .ಜ್ಯೋತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು:</strong> ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದ ಸೀಗೋಡು ಬಳಿಯ ಕಾಫಿ ಸಂಶೋಧನಾ ಕೇಂದ್ರದ (ಸಿಆರ್ಎಸ್) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ವರ್ಷ ಯಾವುದೇ ವಿದ್ಯಾರ್ಥಿಗಳು ದಾಖಲಾಗದ ಕಾರಣ ಮುಚ್ಚುವ ಹಂತ ತಲುಪಿದ್ದು, ಇತಿಹಾಸದ ಪುಟ ಸೇರಲಿದೆ.</p>.<p>1966ರಲ್ಲಿ ಆರಂಭಗೊಂಡ ಈ ಶಾಲೆಯಲ್ಲಿ 7 ಕೊಠಡಿಗಳು, ಒಂದು ಸುಸಜ್ಜಿತ ರಂಗಮಂದಿರ ಇದೆ. ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿ, ವಿವಿಧಡೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲಾಭಿವೃದ್ಧಿ ಸಮಿತಿಯ ಪ್ರಯತ್ನದಿಂದ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಐದು ಕಂಪ್ಯೂಟರ್, ಯುಪಿಎಸ್ ಅಳವಡಿಸಲಾಗಿದೆ. ಇಷ್ಟೆಲ್ಲಾ ಸೌಲಭ್ಯಗಳಿದ್ದರೂ ಸುತ್ತಲಿನ ವಿದ್ಯಾರ್ಥಿಗಳು ಇಲ್ಲಿನ ಶಾಲೆಗೆ ದಾಖಲಾಗುತ್ತಿಲ್ಲ.</p>.<p>ಶಾಲೆ ಉಳಿಸುವ ಸಲುವಾಗಿ ಸುತ್ತಲಿನ ಗಂಟೆನಾಯ್ಕ, ನೇತ್ರಕೊಂಡ, ಗುಂಡಿಖಾನ್ ಮುಂತಾದ ಕಡೆಗೆ ಶಿಕ್ಷಕರು ತೆರಳಿ ದಾಖಲಾತಿ ಅಭಿಯಾನ, ಸಭೆ ನಡೆಸಿದರೂ ಪ್ರಯೋಜನವಾಗಿಲ್ಲ. ಈ ಶೈಕ್ಷಣಿಕ ವರ್ಷದ ಆರಂಭದಲ್ಲಿ 6ನೇ ತರಗತಿಗೆ ಒಬ್ಬ ವಿದ್ಯಾರ್ಥಿನಿ ದಾಖಲಾಗಿದ್ದರು. ಆದರೆ, ಇದೀಗ ಆ ವಿದ್ಯಾರ್ಥಿನಿಯ ಪೋಷಕರೂ ಕೂಡ ಆಕೆಯನ್ನು ಬೇರೆ ಶಾಲೆಗೆ ಸೇರ್ಪಡೆಗೊಳಿಸಲು ಮುಂದಾಗಿದ್ದು ವರ್ಗಾವಣೆ ಪತ್ರಕ್ಕೆ ಕೋರಿಕೆ ಸಲ್ಲಿಸಿದ್ದಾರೆ.</p>.<p>‘ಈಗಾಗಲೇ ವಿದ್ಯಾರ್ಥಿಗಳ ಕೊರತೆಯಿಂದ ಹಿರೇಗದ್ದೆ ಗ್ರಾಮದ ತಲವಾನೆ, ಅರಳಿಕೊಪ್ಪದಲ್ಲಿನ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. ಎಲ್ಲಾ ಸೌಲಭ್ಯಗಳನ್ನು ನೀಡಿದರೂ ಮಕ್ಕಳು ದಾಖಲಾಗುತ್ತಿಲ್ಲ’ ಎನ್ನುತ್ತಾರೆ ಕೊಗಳಿಯ ಪೋಷಕ ಪ್ರಭಾಕರ್.</p>.<p>ಶಾಲೆಯಲ್ಲಿ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರು ಶಿಕ್ಷಕರು ಹಾಗೂ ಒಬ್ಬರು ಬಿಸಿಯೂಟ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಇರುವ ಒಬ್ಬ ವಿದ್ಯಾರ್ಥಿನಿಗಾಗಿ ಈ ಮೂವರೂ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಆ ವಿದ್ಯಾರ್ಥಿನಿಯೂ ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವುದರಿಂದ ಮುಂದೇನು ಎಂಬ ಪ್ರಶ್ನೆ ಮೂಡಿದೆ.</p>.<p>‘ಪಕ್ಕದ ಅಂಗನವಾಡಿಯಲ್ಲೂ ಕೇವಲ ನಾಲ್ಕು ಮಕ್ಕಳಿದ್ದಾರೆ. ಇಲ್ಲಿರುವ ಖಾಸಗಿ ಶಾಲೆಗೆ ಎಲ್ಲರೂ ಮಕ್ಕಳನ್ನು ಸೇರಿಸುತ್ತಿರುವ ಕಾರಣ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಇಲ್ಲದಂತಾಗಿದೆ’ ಎನ್ನುತ್ತಾರೆ ಮುಖ್ಯ ಶಿಕ್ಷಕ ಶೇಖರಪ್ಪ.</p>.<p><strong>‘ಚರ್ಚಿಸಿ ನಿರ್ಧಾರ‘</strong></p><p> ‘ಜುಲೈ 15ರವರೆಗೆ ವಿದ್ಯಾರ್ಥಿಗಳನ್ನು ಶಾಲೆಗೆ ಹೊಸದಾಗಿ ದಾಖಲು ಮಾಡಿಕೊಳ್ಳಲು ಅವಕಾಶವಿದೆ. ಈ ಶಾಲೆಯ ಒಬ್ಬರು ಶಿಕ್ಷಕರನ್ನು ಬೇರೆಡೆಗೆ ನಿಯೋಜಿಸಲು ಚಿಂತಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿದ್ದಲ್ಲಿ ಮುಂದಿನ ಕ್ರಮದ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಕೊಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ .ಜ್ಯೋತಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>