<p><strong>ಚಿಕ್ಕಮಗಳೂರು:</strong> ಪ್ರವಾಸೋದ್ಯಮದ ಹೆಸರಿನಲ್ಲಿ ನಮ್ಮ ಪೂರ್ವಿಕರು ಉಳಿಸಿ ಹೋಗಿರುವ ಈ ಸುಂದರವಾದ ಪ್ರಕೃತಿ-ಪರಿಸರವನ್ನು ಹಾಳು ಮಾಡಲು ಬಿಡದೆ ಸಂರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ನಗರದಿಂದ ಮುತ್ತೋಡಿವರೆಗೆ ನಡೆದ ಬೈಕ್ ರ್ಯಾಲಿಗೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ವಿಶ್ವದಲೇ ಜಿಲ್ಲೆಯು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂದು ಎಲ್ಲೆಡೆಯ ಪ್ರದೇಶಗಳು ಕಾಂಕ್ರೀಟ್ ನಗರವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಜನರು ಪರಿಸರ ಪ್ರೇಮಿಗಳಾಗಿದ್ದು, ಪಶ್ಚಿಮಘಟ್ಟದಲ್ಲಿರುವ ಈ ಜಿಲ್ಲೆಯ ರಮಣೀಯ ಸ್ಥಳಗಳನ್ನು ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಪ್ರವಾಸಿಗರಿಗೆ ಪರಿಸರ ಉಳಿಸುವ ಕಾಳಜಿಯ ಬಗ್ಗೆ ತಿಳಿ ಹೇಳಬೇಕು ಎಂದರು.</p>.<p>ಈಗಾಗಲೇ ಚಂದ್ರದ್ರೋಣ ಪರ್ವತ ಶ್ರೇಣಿಯ ಕೆಲವು ಭಾಗಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲಾಗಿದೆ. ಮುಂದೆ ನಗರವನ್ನು ಸಹ ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಈ ಜಿಲ್ಲೆ ಪಂಚ ನದಿಗಳ ಉಗಮಸ್ಥಾನವಾಗಿದ್ದು, ಪ್ಲಾಸ್ಟಿಕ್ ಹಾವಳಿಯಿಂದ ಈ ನದಿಗಳ ಅಸ್ತಿತ್ವಕ್ಕೆ ಮುಂದೆ ಸಂಚಕಾರ ಬರಬಹುದು. ಹೀಗಾಗಿ ಅವುಗಳನ್ನು ಕಾಪಾಡಿಕೊಳ್ಳುವುದು ಸಹ ನಮ್ಮೆಲ್ಲರ ಜವಾಬ್ದಾರಿ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಪ್ರಪಂಚದ ಭೂಪಟದಲ್ಲಿ ಚಿಕ್ಕಮಗಳೂರನ್ನು ಹುಡುಕುವ ಅಗತ್ಯವಿಲ್ಲ. ಈ ಜಿಲ್ಲೆ ಪ್ರವಾಸೋದ್ಯಮದಲ್ಲಿ ಅಷ್ಟೊಂದು ವಿಶೇಷವಾಗಿ ಗುರುತಿಸಿಕೊಂಡಿದೆ. ಚಿಕ್ಕಮಗಳೂರು ಪರಿಸರವನ್ನು ಉಳಿಸಬೇಕು, ಬೆಳೆಸಬೇಕು. ಪರಿಸರದ ಜತೆಗೆ ಪೀಳಿಗೆಯಲ್ಲಿ ಧಾರ್ಮಿಕತೆ, ಸಾಂಸ್ಕೃತಿಕತೆ ಬಗ್ಗೆ ಆಸಕ್ತಿ ಬೆಳೆಸುವ ಕೆಲಸ ಮಾಡಬೇಕಾಗಿದೆ ಎಂದು ಆಶಿಸಿದರು.</p>.<p> ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್.ಲೋಹಿತ್ ಮಾತನಾಡಿ, ಪ್ರತೀ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚು ಪ್ರಚಲಿತವಿಲ್ಲದ ಪ್ರವಾಸಿ ತಾಣಗಳನ್ನು ಪ್ರಚುರಪಡಿಸುವ ಸಲುವಾಗಿ ಪ್ರತೀ ವರ್ಷವೂ ಬೈಕ್ ರ್ಯಾಲಿ, ಜೀಪ್ ರ್ಯಾಲಿ, ಸೈಕಲ್ ರ್ಯಾಲಿಯನ್ನು ಆಯೋಜಿಸುತ್ತಾ ಬರಲಾಗಿದೆ ಎಂದು ತಿಳಿಸಿದರು.</p>.<p>ವಿಶ್ವ ಪ್ರವಾಸೋದ್ಯಮದ ಪ್ರಯುಕ್ತ ದತ್ತಪೀಠ, ಕವಿಕಲ್ಗಂಡಿ, ಕೊಳಗಾಮೆ ಮಾರ್ಗವಾಗಿ ಮುತ್ತೋಡಿ ಅರಣ್ಯ, ಮಲ್ಲಂದೂರು ಶೂಟಿಂಗ್ ಪಾಯಿಂಟ್, ಉಕ್ಕುಡ ಫಾಲ್ಸ್, ರಂಗನಬೆಟ್ಟ, ಬಂಡಕಲ್ಲು ಬೆಟ್ಟ, ತೋಟ್ಲಪ್ಪನ ಗುಡ್ಡ ಹೀಗೆ ಪರ್ಯಾಯ ತಾಣಗಳತ್ತ ಪ್ರವಾಸಿಗರ ಗಮನ ಸೆಳೆಯುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಕೆಡಿಪಿ ಸಭೆಯಲ್ಲಿ ಟೂರಿಸಂ ವೆಬ್ಸೈಟ್ ಕೂಡ ಲಾಂಚ್ ಆಗಿದೆ. ಅಲ್ಲದೆ, ರೀಲ್ಸ್, ಫೇಸ್ಬುಕ್, ಇನ್ಸ್ಟಾಗ್ರಾಂ ಮೂಲಕ ದೇಶಕ್ಕೆ ಮಾತ್ರವಲ್ಲ, ಪ್ರಪಂಚಕ್ಕೆ ಪ್ರಚುರಪಡಿಸುವ ಸಲುವಾಗಿ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದರು.</p>.<p>ಸುಮಾರು 35 ಮಂದಿ ಬೈಕ್ ಸವಾರರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ವಕೀಲರಾದ ತೇಜಸ್, ರೌಂಡ್ ಟೇಬಲ್ ಅಧ್ಯಕ್ಷ ಅನಿಲ್, ಜೀಪ್ ಅಸೋಸಿಯೇಶನ್ನ ಅಧ್ಯಕ್ಷ ಇನಾಯತ್, ರೆಸಾರ್ಟ್ ಅಸೋಸಿಯೇಶನ್ನ ಪದಾಧಿಕಾರಿಗಳು ಪಾಲ್ಗೊಂಡಿದ್ದರು. </p>.<p>ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ರೌಂಡ್ ಟೇಬಲ್, ಜಿಲ್ಲಾ ಹೋಂಸ್ಟೇ ಮಾಲೀಕರ ಸಂಘ, ಜಿಲ್ಲಾ ರೆಸಾರ್ಟ್ ಮಾಲೀಕರ ಸಂಘ, ಜೀಪ್ ಅಸೋಸಿಯೇಶನ್, ಅಡ್ವೆಂಚರ್ ಕ್ಲಬ್ ಸಹಯೋಗದಲ್ಲಿ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಪ್ರವಾಸೋದ್ಯಮದ ಹೆಸರಿನಲ್ಲಿ ನಮ್ಮ ಪೂರ್ವಿಕರು ಉಳಿಸಿ ಹೋಗಿರುವ ಈ ಸುಂದರವಾದ ಪ್ರಕೃತಿ-ಪರಿಸರವನ್ನು ಹಾಳು ಮಾಡಲು ಬಿಡದೆ ಸಂರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ನಗರದಿಂದ ಮುತ್ತೋಡಿವರೆಗೆ ನಡೆದ ಬೈಕ್ ರ್ಯಾಲಿಗೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ವಿಶ್ವದಲೇ ಜಿಲ್ಲೆಯು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ. ಇಂದು ಎಲ್ಲೆಡೆಯ ಪ್ರದೇಶಗಳು ಕಾಂಕ್ರೀಟ್ ನಗರವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಜನರು ಪರಿಸರ ಪ್ರೇಮಿಗಳಾಗಿದ್ದು, ಪಶ್ಚಿಮಘಟ್ಟದಲ್ಲಿರುವ ಈ ಜಿಲ್ಲೆಯ ರಮಣೀಯ ಸ್ಥಳಗಳನ್ನು ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಪ್ರವಾಸಿಗರಿಗೆ ಪರಿಸರ ಉಳಿಸುವ ಕಾಳಜಿಯ ಬಗ್ಗೆ ತಿಳಿ ಹೇಳಬೇಕು ಎಂದರು.</p>.<p>ಈಗಾಗಲೇ ಚಂದ್ರದ್ರೋಣ ಪರ್ವತ ಶ್ರೇಣಿಯ ಕೆಲವು ಭಾಗಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲಾಗಿದೆ. ಮುಂದೆ ನಗರವನ್ನು ಸಹ ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಈ ಜಿಲ್ಲೆ ಪಂಚ ನದಿಗಳ ಉಗಮಸ್ಥಾನವಾಗಿದ್ದು, ಪ್ಲಾಸ್ಟಿಕ್ ಹಾವಳಿಯಿಂದ ಈ ನದಿಗಳ ಅಸ್ತಿತ್ವಕ್ಕೆ ಮುಂದೆ ಸಂಚಕಾರ ಬರಬಹುದು. ಹೀಗಾಗಿ ಅವುಗಳನ್ನು ಕಾಪಾಡಿಕೊಳ್ಳುವುದು ಸಹ ನಮ್ಮೆಲ್ಲರ ಜವಾಬ್ದಾರಿ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಪ್ರಪಂಚದ ಭೂಪಟದಲ್ಲಿ ಚಿಕ್ಕಮಗಳೂರನ್ನು ಹುಡುಕುವ ಅಗತ್ಯವಿಲ್ಲ. ಈ ಜಿಲ್ಲೆ ಪ್ರವಾಸೋದ್ಯಮದಲ್ಲಿ ಅಷ್ಟೊಂದು ವಿಶೇಷವಾಗಿ ಗುರುತಿಸಿಕೊಂಡಿದೆ. ಚಿಕ್ಕಮಗಳೂರು ಪರಿಸರವನ್ನು ಉಳಿಸಬೇಕು, ಬೆಳೆಸಬೇಕು. ಪರಿಸರದ ಜತೆಗೆ ಪೀಳಿಗೆಯಲ್ಲಿ ಧಾರ್ಮಿಕತೆ, ಸಾಂಸ್ಕೃತಿಕತೆ ಬಗ್ಗೆ ಆಸಕ್ತಿ ಬೆಳೆಸುವ ಕೆಲಸ ಮಾಡಬೇಕಾಗಿದೆ ಎಂದು ಆಶಿಸಿದರು.</p>.<p> ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಆರ್.ಲೋಹಿತ್ ಮಾತನಾಡಿ, ಪ್ರತೀ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚು ಪ್ರಚಲಿತವಿಲ್ಲದ ಪ್ರವಾಸಿ ತಾಣಗಳನ್ನು ಪ್ರಚುರಪಡಿಸುವ ಸಲುವಾಗಿ ಪ್ರತೀ ವರ್ಷವೂ ಬೈಕ್ ರ್ಯಾಲಿ, ಜೀಪ್ ರ್ಯಾಲಿ, ಸೈಕಲ್ ರ್ಯಾಲಿಯನ್ನು ಆಯೋಜಿಸುತ್ತಾ ಬರಲಾಗಿದೆ ಎಂದು ತಿಳಿಸಿದರು.</p>.<p>ವಿಶ್ವ ಪ್ರವಾಸೋದ್ಯಮದ ಪ್ರಯುಕ್ತ ದತ್ತಪೀಠ, ಕವಿಕಲ್ಗಂಡಿ, ಕೊಳಗಾಮೆ ಮಾರ್ಗವಾಗಿ ಮುತ್ತೋಡಿ ಅರಣ್ಯ, ಮಲ್ಲಂದೂರು ಶೂಟಿಂಗ್ ಪಾಯಿಂಟ್, ಉಕ್ಕುಡ ಫಾಲ್ಸ್, ರಂಗನಬೆಟ್ಟ, ಬಂಡಕಲ್ಲು ಬೆಟ್ಟ, ತೋಟ್ಲಪ್ಪನ ಗುಡ್ಡ ಹೀಗೆ ಪರ್ಯಾಯ ತಾಣಗಳತ್ತ ಪ್ರವಾಸಿಗರ ಗಮನ ಸೆಳೆಯುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಕೆಡಿಪಿ ಸಭೆಯಲ್ಲಿ ಟೂರಿಸಂ ವೆಬ್ಸೈಟ್ ಕೂಡ ಲಾಂಚ್ ಆಗಿದೆ. ಅಲ್ಲದೆ, ರೀಲ್ಸ್, ಫೇಸ್ಬುಕ್, ಇನ್ಸ್ಟಾಗ್ರಾಂ ಮೂಲಕ ದೇಶಕ್ಕೆ ಮಾತ್ರವಲ್ಲ, ಪ್ರಪಂಚಕ್ಕೆ ಪ್ರಚುರಪಡಿಸುವ ಸಲುವಾಗಿ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದರು.</p>.<p>ಸುಮಾರು 35 ಮಂದಿ ಬೈಕ್ ಸವಾರರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ವಕೀಲರಾದ ತೇಜಸ್, ರೌಂಡ್ ಟೇಬಲ್ ಅಧ್ಯಕ್ಷ ಅನಿಲ್, ಜೀಪ್ ಅಸೋಸಿಯೇಶನ್ನ ಅಧ್ಯಕ್ಷ ಇನಾಯತ್, ರೆಸಾರ್ಟ್ ಅಸೋಸಿಯೇಶನ್ನ ಪದಾಧಿಕಾರಿಗಳು ಪಾಲ್ಗೊಂಡಿದ್ದರು. </p>.<p>ಜಿಲ್ಲಾ ಪ್ರವಾಸೋದ್ಯಮ ಇಲಾಖೆ, ರೌಂಡ್ ಟೇಬಲ್, ಜಿಲ್ಲಾ ಹೋಂಸ್ಟೇ ಮಾಲೀಕರ ಸಂಘ, ಜಿಲ್ಲಾ ರೆಸಾರ್ಟ್ ಮಾಲೀಕರ ಸಂಘ, ಜೀಪ್ ಅಸೋಸಿಯೇಶನ್, ಅಡ್ವೆಂಚರ್ ಕ್ಲಬ್ ಸಹಯೋಗದಲ್ಲಿ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>