<p><strong>ಕಡೂರು</strong>: ‘ಸಾಮಾಜಿಕವಾಗಿ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ದೊರೆಯಬೇಕೆಂಬ ಆಶಯ ನ್ಯಾಯಾಂಗದ್ದು’ ಎಂದು ಸಿವಿಲ್ ನ್ಯಾಯಾಧೀಶ ಇರ್ಪಾನ್ ಹೇಳಿದರು.</p>.<p>ಕಡೂರು ಹೊರವಲಯದ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಗುರುವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ ನೀಡಿದೆ. ದೇಶವಾಸಿಗಳೆಲ್ಲರೂ ಸಮಾನರು. ಅಲ್ಲಿ ಮೇಲು ಕೀಳು, ಧರ್ಮಗಳ ಉಲ್ಲೇಖವಿಲ್ಲ. ಸರ್ವರಿಗೂ ಸಮಪಾಲು- ಸಮಬಾಳು ಎಂಬ ಉದಾತ್ತ ಚಿಂತನೆ ಇದೆ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂವಿಧಾನದ ಬಗ್ಗೆ ಎಲ್ಲರೂ ಅರಿವು ಮೂಡಿಸಿಕೊಳ್ಳಬೇಕು’ ಎಂದರು.</p>.<p> ವಕೀಲ ಎಂ.ಎಸ್.ಹೆಳವರ ಮಾತನಾಡಿ, ‘ಕಾನೂನುಗಳ ಬಗ್ಗೆ ಅರಿವು ಮೂಡಿಸುವುದರ ಜೊತೆ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ಹೆಚ್ಚು ಗಮನ ಕೊಡಬೇಕು. ಮಾನವೀಯ ಗುಣಗಳನ್ನು ಅವರಲ್ಲಿ ಬೆಳೆಸಬೇಕು’ ಎಂದರು. </p>.<p>ಪ್ರಾಂಶುಪಾಲೆ ಮಂಜುಳಾ ವಿಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು</strong>: ‘ಸಾಮಾಜಿಕವಾಗಿ ಪ್ರತಿಯೊಬ್ಬ ಪ್ರಜೆಗೂ ನ್ಯಾಯ ದೊರೆಯಬೇಕೆಂಬ ಆಶಯ ನ್ಯಾಯಾಂಗದ್ದು’ ಎಂದು ಸಿವಿಲ್ ನ್ಯಾಯಾಧೀಶ ಇರ್ಪಾನ್ ಹೇಳಿದರು.</p>.<p>ಕಡೂರು ಹೊರವಲಯದ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಗುರುವಾರ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ ನೀಡಿದೆ. ದೇಶವಾಸಿಗಳೆಲ್ಲರೂ ಸಮಾನರು. ಅಲ್ಲಿ ಮೇಲು ಕೀಳು, ಧರ್ಮಗಳ ಉಲ್ಲೇಖವಿಲ್ಲ. ಸರ್ವರಿಗೂ ಸಮಪಾಲು- ಸಮಬಾಳು ಎಂಬ ಉದಾತ್ತ ಚಿಂತನೆ ಇದೆ. ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸಂವಿಧಾನದ ಬಗ್ಗೆ ಎಲ್ಲರೂ ಅರಿವು ಮೂಡಿಸಿಕೊಳ್ಳಬೇಕು’ ಎಂದರು.</p>.<p> ವಕೀಲ ಎಂ.ಎಸ್.ಹೆಳವರ ಮಾತನಾಡಿ, ‘ಕಾನೂನುಗಳ ಬಗ್ಗೆ ಅರಿವು ಮೂಡಿಸುವುದರ ಜೊತೆ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ಹೆಚ್ಚು ಗಮನ ಕೊಡಬೇಕು. ಮಾನವೀಯ ಗುಣಗಳನ್ನು ಅವರಲ್ಲಿ ಬೆಳೆಸಬೇಕು’ ಎಂದರು. </p>.<p>ಪ್ರಾಂಶುಪಾಲೆ ಮಂಜುಳಾ ವಿಜಯಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>