‘ಭ್ರಷ್ಟಾಚಾರ ಸಾಕು, ಜನಲೋಕಪಾಲ ಬೇಕು’ ಎಂದು ಹೋರಾಟಗಾರ ಅಣ್ಣಾ ಹಜಾರೆ ಮಹಾರಾಷ್ಟ್ರದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿರುವುದನ್ನು ಬೆಂಬಲಿಸಿ ಸಂಸ್ಥೆ ವತಿಯಿಂದ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ನಡೆದ ಧರಣಿಯಲ್ಲಿ ಮಾತನಾಡಿದರು. ‘ದೇಶಕ್ಕೆ ಭ್ರಷ್ಟಾಚಾರದ ಗೆದ್ದಲು ಹಿಡಿದಿದೆ. ಬಿಗಿಕಾನೂನು ಜಾರಿಗೊಳಿಸಿ ಗೆದ್ದಲನ್ನು ನಿರ್ಮೂಲನೆ ಮಾಡಬೇಕು. ದೇಶವನ್ನು ಭ್ರಷ್ಟಾಚಾರ ಮುಕ್ತಗೊಳಿಸುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಆದರೆ, ಅದನ್ನು ಪರಿಣಾಮಕಾರಿಯಾಗಿ ಮಾಡಿಲ್ಲ’ ಎಂದು ಹೇಳಿದರು.