‘ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್, ಬೆಲ್ಲದ್, ವಿಶ್ವನಾಥ್ ಅವರು ವಿಜಯೇಂದ್ರ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನಮ್ಮದು ಶಿಸ್ತಿನ ಪಕ್ಷ, ಶ್ರೀರಾಮಚಂದ್ರನ ಮೊಮ್ಮಕ್ಕಳು ನಾವು ಎಂದು ಹೇಳಿಕೊಳ್ಳಲು ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ? ಕಾಂಗ್ರೆಸ್ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇದೆಯೇ’ ಎಂದು ಪ್ರಶ್ನಿಸಿದರು.