ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ್ಯ ಉದ್ಯೋಗಕ್ಕೆ ಅನಿವಾರ್ಯ: ಓಸ್ವಾಲ್ಡ್ ಪಿರೆರಾ

Last Updated 6 ಡಿಸೆಂಬರ್ 2022, 4:11 IST
ಅಕ್ಷರ ಗಾತ್ರ

ಕಳಸ: ‘ಉದ್ಯೋಗ ಮಾರುಕಟ್ಟೆಯಲ್ಲಿ ಕೆಲಸ ಗಿಟ್ಟಿಸಿ, ಯಶಸ್ವಿಯಾಗಲು ಉದ್ಯೋಗ ಸಂಬಂಧಿ ಕೌಶಲಗಳ ಜ್ಞಾನ ಅನಿವಾರ್ಯ. ವಿದ್ಯಾರ್ಥಿಗಳು ಪಠ್ಯಜ್ಞಾನದ ಜತೆಗೆ ಕೌಶಲಗಳನ್ನು ಪದವಿ ಹಂತದಲ್ಲಿಯೇ ಕಲಿತುಕೊಳ್ಳಬೇಕು’ ಎಂದು ಬೆಂಗಳೂರಿನ ಎ.ಎನ್.ಝಡ್ ಸಂಸ್ಥೆಯ ಉಪಾಧ್ಯಕ್ಷ ಯಡೂರಿನ ಓಸ್ವಾಲ್ಡ್ ಪಿರೆರಾ ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ವೃತ್ತಿ ಕೌಶಲ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಭಾಗವಹಿಸಿದರು.

‘ಆತ್ಮವಿಶ್ವಾಸವೊಂದೇ ಮನುಷ್ಯನನ್ನು ಉನ್ನತ ಮಟ್ಟಕ್ಕೆ ಏರಿಸುತ್ತದೆ. ಕೌಶಲಜ್ಞಾನ ಹಾಗೂ ಪಠ್ಯಜ್ಞಾನ ಉದ್ಯೋಗಾಕಾಂಕ್ಷಿಗಳಿಗೆ ಆತ್ಮವಿಶ್ವಾಸ ತುಂಬುತ್ತದೆ. ವಿದ್ಯಾರ್ಥಿಗಳು ಪ್ರತಿದಿನವೂ ಕೌಶಲ ಅಭಿವೃದ್ಧಿಗೆ ಸಮಯ ಮೀಸಲಿಡಬೇಕು, ಇದರಿಂದ ಸ್ಪರ್ಧಾತ್ಮಕ ವಾತಾವರಣದಲ್ಲಿ ಯಶಸ್ಸು ಪಡೆಯಲು ಸಾಧ್ಯ’ ಎಂದರು.

ಕಳಸ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಯಾ ಸದಾನಂದ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಮುಂದಾಗಿರುವ ಯಡೂರಿನ ಓಸ್ವಾಲ್ಡ ಪಿರೆರಾ ಮತ್ತು ಅವರ ತಂಡದ ಪ್ರಯತ್ನ ಶ್ಲಾಘನೀಯ ಎಂದರು.

ಕಳಸ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಹರ್ಷವರ್ಧನ್ ಮಾತನಾಡಿ ‘ವಿದ್ಯಾರ್ಥಿಗಳು ಪ್ರತಿದಿನವೂ ತಮ್ಮ ಜ್ಞಾನ ಹಾಗೂ ಕೌಶಲ ಹೆಚ್ಚಿಸಿಕೊಳ್ಳುತ್ತಿರಬೇಕು ಇದರಿಂದ ಸಂದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಾಯವಾಗಲಿದೆ’ ಎಂದರು.

ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿಯನ್ನು ಎ.ಎನ್.ಝಡ್ ಸಂಸ್ಥೆಯ ಸದಸ್ಯರು ನೀಡಿದರು. ಆಯ್ದ ವಿದ್ಯಾರ್ಥಿಗಳಿಗೆ ಅಣಕು ಸಂದರ್ಶನವನ್ನು ಎರಡು ಹಂತದಲ್ಲಿ ನಡೆಸಲಾಯಿತು. ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ಸಂತೋಷ ಕೆ.ಬಿ. ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಪ್ರಾಂಶುಪಾಲ ವಿನಯಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಡಾ. ಆದಿತ್ಯ ಅಡಿಗ, ವಿದ್ಯಾರ್ಥಿಗಳಾದ ಕೌಶಿಕ್, ಸುಕೇಶ್, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT