<p><strong>ತರೀಕೆರೆ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ವಿವಿಧ ಮೂಲಗಳಿಂದ ಮುಂದಿನ ದಿನಗಳಲ್ಲಿ ರೈತರಿಗೆ ಪ್ರತಿ ದಿನ 7 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.</p>.<p>ತಾಲ್ಲೂಕಿನ ನಂದಿ ಹೊಸಳ್ಳಿ ಗ್ರಾಮದಲ್ಲಿ 66/11 ಕೆ.ವಿ.ವಿದ್ಯುತ್ ಉಪಕೇಂದ್ರ ಉದ್ಘಾಟನೆ, ನಂದಿ ಗ್ರಾಮದಲ್ಲಿ ಕುಸುಮ್ ಸಿ.ಯೋಜನೆಯ ಸೌರ ವಿದ್ಯುತ್ ಘಟಕ, ಯರೇಹಳ್ಳಿಯಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷದ ಹಿಂದೆ ಅಧಿಕಾರಕ್ಕೆ ಬಂದ ನಂತರ 13,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಹೆಚ್ಚಾಯಿತು. ಈ ಬಗ್ಗೆ ಮುಖ್ಯಮಂತ್ರಿಗಳು ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಸೂಚಿಸಿದರು. ಹಲವು ಹಂತಗಳಲ್ಲಿ ಪರಿಹಾರ ಮಾರ್ಗೋಪಾಯ ಕಂಡುಕೊಂಡು ರಾಜ್ಯದ ಜನರಿಗೆ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>2004ರಲ್ಲಿ ಅಕ್ರಮ-ಸಕ್ರಮ ಜಾರಿಯಾಗಿದ್ದು, ಇದರಲ್ಲಿ 4.5 ಲಕ್ಷ ರೈತರು ಸಕ್ರಮಕ್ಕಾಗಿ ಹಣ ಪಾವತಿಸಿದ್ದಾರೆ. ಇದರಲ್ಲಿ 500 ಮೀ. ಒಳಗಿರುವ ರೈತರ ಪಂಪ್ಸೆಟ್ಗಳಿಗೂ ಸಂಪರ್ಕ ಕಲ್ಪಿಸಲು ಈಗಾಗಲೇ ಸೂಚಿಸಲಾಗಿದೆ. ಇದಕ್ಕಿಂತ ಹೆಚ್ಚಿನ ದೂರದವರಿಗೆ ಕುಸುಮ್ ಬಿ. ಯೋಜನೆಯಡಿ ಸಂಪರ್ಕ ಪಡೆದುಕೊಳ್ಳಬೇಕು. ಈ ಯೋಜನೆಯಲ್ಲಿ ಈಗಾಗಲೇ 30,000 ರೈತರು ಅರ್ಜಿ ಸಲ್ಲಿಸಿದ್ದಾರೆ. ಉಳಿದ ರೈತರು ಶೀಘ್ರ ನೋಂದಾಯಿಸಿಕೊಂಡು ಸಂಪರ್ಕ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಅಂತಹ ರೈತರ ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದರು.</p>.<p>ಕುಸುಮ್ ಸಿ ಯೋಜನೆಯಡಿ ವಿದ್ಯುತ್ ಉತ್ಪಾದಿಸಲು ಖಾಸಗಿಯವರಿಗೆ ವಹಿಸಲಾಗಿದ್ದು, ಸರ್ಕಾರದ ಜಮೀನಿನ ಜತೆಗೆ ಖಾಸಗಿಯವರ ಒಂದು ಎಕರೆಗೆ ಜಮೀನಿಗೆ ವಾರ್ಷಿಕ ₹ 25,000 ಲೀಸ್ಗೆ ನಿಗದಿಪಡಿಸಿದ್ದು, ಇದು ಮುಂದೆ ಹೆಚ್ಚಾಗಬಹುದು. ಇದರಿಂದ ಉತ್ಪಾದನೆಯಾದ ವಿದ್ಯುತ್ ಅನ್ನು ಸರ್ಕಾರ ಖರೀದಿಸಿ ರೈತರಿಗೆ ಸರಬರಾಜು ಮಾಡುವುದರಿಂದ ರಾಜ್ಯ ವಿದ್ಯುತ್ ಕೊರತೆಯನ್ನು ತಪ್ಪಿಸಬಹುದಾಗಿದೆ ಎಂದರು.</p>.<p>‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಐವರು ಕಾಂಗ್ರೆಸ್ ಶಾಸಕರಿದ್ದು, ಅವರಲ್ಲಿ ಒಬ್ಬರಿಗೆ ಮಂತ್ರಿ ಸ್ಥಾನ ನೀಡಿ, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ ಎಂದರು.</p>.<p>ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, 2013ರಲ್ಲಿ ಮೊದಲು ಶಾಸಕನಾಗಿದ್ದಾಗಲೇ ಅಮೃತಾಪುರ ಹೋಬಳಿಯ ಹಲವಾರು ಹಳ್ಳಿಗಳಲ್ಲಿ ರೈತರು ವಿದ್ಯುತ್ ಅಭಾವದಿಂದ ಬಳಲುತ್ತಿದ್ದರು. ಈ ಬಗ್ಗೆ ಸಚಿವರ ಬಳಿ ಮನವಿ ಮಾಡಿದ ನಂತರ, ಇದಕ್ಕೆ ಸ್ಪಂದಿಸಿದ್ದು, ಬಹುದಿನಗಳ ಬೇಡಿಕೆಯಾಗಿದ್ದ ಈ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಯಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಂಡತಾಗುತ್ತದೆ ಎಂದರು.</p>.<p>ದೋರನಾಳು ಸಮೀಪ 220 ಕೆ.ವಿ.ವಿದ್ಯುತ್ ಸ್ವೀಕರಣ ಕೇಂದ್ರ (ರಿಸೀವಿಂಗ್ ಸ್ಟೇಷನ್), ಲಿಂಗದಹಳ್ಳಿ, ಮತ್ತು ಕೆಮ್ಮಣ್ಣುಗುಂಡಿ ಹೊಸ ವಿದ್ಯುತ್ ಮಾರ್ಗಗಳಿಗೆ ಪ್ರಸ್ತಾಪ ಸಲ್ಲಿಸಲಾಗಿದೆ. ಬಾವಿಕೆರೆ, ಹುಣಸಘಟ್ಟ, ಬೇಲೇನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ಮಂಜೂರು ಮಾಡಬೇಕು ಎಂದು ಸಚಿವರಲ್ಲಿ ಬೇಡಿಕೆ ಇಟ್ಟರು.</p>.<p>ಕೇಂದ್ರ ಸರ್ಕಾರ ನರೇಗಾ ಯೋಜನೆಯನ್ನು ಬದಲಿ ಗ್ರಾಮೀಣ ಜನರ ಹಕ್ಕುಗಳನ್ನು ಕಸಿದುಕೊಂಡಿದೆ. ಇದರಲ್ಲಿ ಇದುವರೆಗೂ ಗ್ರಾಮ ಪಂಚಾಯಿತಿಯಲ್ಲಿಯೇ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿತ್ತು. ಇದನ್ನು ಈಗ ತೆಗೆದಿದ್ದು ಕೇಂದ್ರ ಸರ್ಕಾರವೇ ಕಾಮಗಾರಿಗಳನ್ನು ನಿಗಧಿಪಡಿಸುವಂತೆ ರೂಪಿಸಲಾಗಿದೆ. ಇದನ್ನು ಸಾರ್ವರ್ತಿಕವಾಗಿ ವಿರೋಧಿಸಬೇಕಾಗಿದೆ ಎಂದರು.</p>.<p>ಸಭೆಯಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಕಾಡಾ ಅಧ್ಯಕ್ಷ ಡಾ.ಅಂಶುಮತ್, ಹಾದೀಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ರವೀಶಯ್ಯ, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಉಪವಿಭಾಗಾಧಿಕಾರಿ ಎನ್.ವಿ.ನಟೇಶ್, ಮೆಸ್ಕಾಂ ಮುಖ್ಯ ಎಂಜಿನಿಯರ್ ಜಿ.ಪಿ.ನಾಗರಾಜ ಮೊದಲಾದವರಿದ್ದರು.</p>.<p>ಕೆಂಚರಾಜ್ ಸ್ವಾಗತಿಸಿದರು. ಶಿವಮೊಗ್ಗ ವಲಯದ ಮೆಸ್ಕಾಂ ಅಧೀಕ್ಷಕ ಎಂಜಿನಿಯರ್ ಕೆ. ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ವಿವಿಧ ಮೂಲಗಳಿಂದ ಮುಂದಿನ ದಿನಗಳಲ್ಲಿ ರೈತರಿಗೆ ಪ್ರತಿ ದಿನ 7 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.</p>.<p>ತಾಲ್ಲೂಕಿನ ನಂದಿ ಹೊಸಳ್ಳಿ ಗ್ರಾಮದಲ್ಲಿ 66/11 ಕೆ.ವಿ.ವಿದ್ಯುತ್ ಉಪಕೇಂದ್ರ ಉದ್ಘಾಟನೆ, ನಂದಿ ಗ್ರಾಮದಲ್ಲಿ ಕುಸುಮ್ ಸಿ.ಯೋಜನೆಯ ಸೌರ ವಿದ್ಯುತ್ ಘಟಕ, ಯರೇಹಳ್ಳಿಯಲ್ಲಿ 110/11 ಕೆ.ವಿ. ವಿದ್ಯುತ್ ಉಪಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.</p>.<p>ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷದ ಹಿಂದೆ ಅಧಿಕಾರಕ್ಕೆ ಬಂದ ನಂತರ 13,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಹೆಚ್ಚಾಯಿತು. ಈ ಬಗ್ಗೆ ಮುಖ್ಯಮಂತ್ರಿಗಳು ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಸೂಚಿಸಿದರು. ಹಲವು ಹಂತಗಳಲ್ಲಿ ಪರಿಹಾರ ಮಾರ್ಗೋಪಾಯ ಕಂಡುಕೊಂಡು ರಾಜ್ಯದ ಜನರಿಗೆ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>2004ರಲ್ಲಿ ಅಕ್ರಮ-ಸಕ್ರಮ ಜಾರಿಯಾಗಿದ್ದು, ಇದರಲ್ಲಿ 4.5 ಲಕ್ಷ ರೈತರು ಸಕ್ರಮಕ್ಕಾಗಿ ಹಣ ಪಾವತಿಸಿದ್ದಾರೆ. ಇದರಲ್ಲಿ 500 ಮೀ. ಒಳಗಿರುವ ರೈತರ ಪಂಪ್ಸೆಟ್ಗಳಿಗೂ ಸಂಪರ್ಕ ಕಲ್ಪಿಸಲು ಈಗಾಗಲೇ ಸೂಚಿಸಲಾಗಿದೆ. ಇದಕ್ಕಿಂತ ಹೆಚ್ಚಿನ ದೂರದವರಿಗೆ ಕುಸುಮ್ ಬಿ. ಯೋಜನೆಯಡಿ ಸಂಪರ್ಕ ಪಡೆದುಕೊಳ್ಳಬೇಕು. ಈ ಯೋಜನೆಯಲ್ಲಿ ಈಗಾಗಲೇ 30,000 ರೈತರು ಅರ್ಜಿ ಸಲ್ಲಿಸಿದ್ದಾರೆ. ಉಳಿದ ರೈತರು ಶೀಘ್ರ ನೋಂದಾಯಿಸಿಕೊಂಡು ಸಂಪರ್ಕ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಅಂತಹ ರೈತರ ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದರು.</p>.<p>ಕುಸುಮ್ ಸಿ ಯೋಜನೆಯಡಿ ವಿದ್ಯುತ್ ಉತ್ಪಾದಿಸಲು ಖಾಸಗಿಯವರಿಗೆ ವಹಿಸಲಾಗಿದ್ದು, ಸರ್ಕಾರದ ಜಮೀನಿನ ಜತೆಗೆ ಖಾಸಗಿಯವರ ಒಂದು ಎಕರೆಗೆ ಜಮೀನಿಗೆ ವಾರ್ಷಿಕ ₹ 25,000 ಲೀಸ್ಗೆ ನಿಗದಿಪಡಿಸಿದ್ದು, ಇದು ಮುಂದೆ ಹೆಚ್ಚಾಗಬಹುದು. ಇದರಿಂದ ಉತ್ಪಾದನೆಯಾದ ವಿದ್ಯುತ್ ಅನ್ನು ಸರ್ಕಾರ ಖರೀದಿಸಿ ರೈತರಿಗೆ ಸರಬರಾಜು ಮಾಡುವುದರಿಂದ ರಾಜ್ಯ ವಿದ್ಯುತ್ ಕೊರತೆಯನ್ನು ತಪ್ಪಿಸಬಹುದಾಗಿದೆ ಎಂದರು.</p>.<p>‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಐವರು ಕಾಂಗ್ರೆಸ್ ಶಾಸಕರಿದ್ದು, ಅವರಲ್ಲಿ ಒಬ್ಬರಿಗೆ ಮಂತ್ರಿ ಸ್ಥಾನ ನೀಡಿ, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇನೆ ಎಂದರು.</p>.<p>ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, 2013ರಲ್ಲಿ ಮೊದಲು ಶಾಸಕನಾಗಿದ್ದಾಗಲೇ ಅಮೃತಾಪುರ ಹೋಬಳಿಯ ಹಲವಾರು ಹಳ್ಳಿಗಳಲ್ಲಿ ರೈತರು ವಿದ್ಯುತ್ ಅಭಾವದಿಂದ ಬಳಲುತ್ತಿದ್ದರು. ಈ ಬಗ್ಗೆ ಸಚಿವರ ಬಳಿ ಮನವಿ ಮಾಡಿದ ನಂತರ, ಇದಕ್ಕೆ ಸ್ಪಂದಿಸಿದ್ದು, ಬಹುದಿನಗಳ ಬೇಡಿಕೆಯಾಗಿದ್ದ ಈ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಯಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಂಡತಾಗುತ್ತದೆ ಎಂದರು.</p>.<p>ದೋರನಾಳು ಸಮೀಪ 220 ಕೆ.ವಿ.ವಿದ್ಯುತ್ ಸ್ವೀಕರಣ ಕೇಂದ್ರ (ರಿಸೀವಿಂಗ್ ಸ್ಟೇಷನ್), ಲಿಂಗದಹಳ್ಳಿ, ಮತ್ತು ಕೆಮ್ಮಣ್ಣುಗುಂಡಿ ಹೊಸ ವಿದ್ಯುತ್ ಮಾರ್ಗಗಳಿಗೆ ಪ್ರಸ್ತಾಪ ಸಲ್ಲಿಸಲಾಗಿದೆ. ಬಾವಿಕೆರೆ, ಹುಣಸಘಟ್ಟ, ಬೇಲೇನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ಮಂಜೂರು ಮಾಡಬೇಕು ಎಂದು ಸಚಿವರಲ್ಲಿ ಬೇಡಿಕೆ ಇಟ್ಟರು.</p>.<p>ಕೇಂದ್ರ ಸರ್ಕಾರ ನರೇಗಾ ಯೋಜನೆಯನ್ನು ಬದಲಿ ಗ್ರಾಮೀಣ ಜನರ ಹಕ್ಕುಗಳನ್ನು ಕಸಿದುಕೊಂಡಿದೆ. ಇದರಲ್ಲಿ ಇದುವರೆಗೂ ಗ್ರಾಮ ಪಂಚಾಯಿತಿಯಲ್ಲಿಯೇ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿತ್ತು. ಇದನ್ನು ಈಗ ತೆಗೆದಿದ್ದು ಕೇಂದ್ರ ಸರ್ಕಾರವೇ ಕಾಮಗಾರಿಗಳನ್ನು ನಿಗಧಿಪಡಿಸುವಂತೆ ರೂಪಿಸಲಾಗಿದೆ. ಇದನ್ನು ಸಾರ್ವರ್ತಿಕವಾಗಿ ವಿರೋಧಿಸಬೇಕಾಗಿದೆ ಎಂದರು.</p>.<p>ಸಭೆಯಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಕಾಡಾ ಅಧ್ಯಕ್ಷ ಡಾ.ಅಂಶುಮತ್, ಹಾದೀಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ರವೀಶಯ್ಯ, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಉಪವಿಭಾಗಾಧಿಕಾರಿ ಎನ್.ವಿ.ನಟೇಶ್, ಮೆಸ್ಕಾಂ ಮುಖ್ಯ ಎಂಜಿನಿಯರ್ ಜಿ.ಪಿ.ನಾಗರಾಜ ಮೊದಲಾದವರಿದ್ದರು.</p>.<p>ಕೆಂಚರಾಜ್ ಸ್ವಾಗತಿಸಿದರು. ಶಿವಮೊಗ್ಗ ವಲಯದ ಮೆಸ್ಕಾಂ ಅಧೀಕ್ಷಕ ಎಂಜಿನಿಯರ್ ಕೆ. ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>