<p><strong>ತರೀಕೆರೆ:</strong> 9 ವರ್ಷಗಳಿಂದ ನಿರಂತರ ಹೋರಾಟ ಮಾಡಿದರೂ, ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರೈತರು ಟೋಲ್ ನಿರ್ಮಿಸಿ ಪ್ರತಿ ವಾಹನದಿಂದ ₹1 ಸಂಗ್ರಹ ಮಾಡಲು ನಿರ್ಧರಿಸಿದ್ದಾರೆ.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶ್ರೀಗಂಧ ಬೆಳೆದ 22 ಮಂದಿಯಿಂದ ಭೂಮಿ ಸ್ವಾಧೀನಪಡಿಸಿಕೊಂಡಿದೆ. ಆ ಜಾಗದ ಶ್ರೀಗಂಧದ ಮರವೊಂದಕ್ಕೆ ಕೆಎಸ್ಡಿಎಲ್ ₹ 2.44 ಲಕ್ಷ ನಿಗದಿ ಮಾಡಿದೆ. ಈ ದರ ನೀಡಲು ಹಿಂದೇಟು ಹಾಕಿದ ಪ್ರಾಧಿಕಾರ ಅರಣ್ಯ ಇಲಾಖೆ ನಿಗದಿಪಡಿಸಿರುವ ₹ 420 ಪರಿಹಾರವಾಗಿ ನೀಡಲು ಮುಂದಾಗಿದೆ ಎಂದರು.</p>.<p>ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡಲು ಪ್ರಾಧಿಕಾರ ಮೀನಾಮೇಷ ಎಣಿಸುತ್ತಿದೆ. ತೆಂಗು, ಮಾವು, ನಿಂಬೆ ಗಿಡಕ್ಕಿಂತಲೂ ಕಡಿಮೆ ಬೆಲೆಯನ್ನು ಶ್ರೀಗಂಧಕ್ಕೆ ನಿಗದಿಪಡಿಸಲಾಗಿದೆ. ಇದರಿಂದ ಸಂತ್ರಸ್ತರಿಗೆ ಅನ್ಯಾಯವಾಗಲಿದೆ ಎಂದರು.</p>.<p>ಶ್ರೀಗಂಧ ಬೆಳೆಗಾರರ ಸಂಘದ ರಾಜ್ಯ ಸಂಚಾಲಕ ಟಿ.ಎನ್ ವಿಶುಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ್, ಮುಖಂಡ ಓಂಕಾರಪ್ಪ, ಮೂರ್ತಿ, ಸವಿತಾ, ನವೀನ್, ಪ್ರತಾಪ್ ಕುಮಾರ್, ತಿಪ್ಪೇಶಪ್ಪ, ಕುಪ್ಪಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> 9 ವರ್ಷಗಳಿಂದ ನಿರಂತರ ಹೋರಾಟ ಮಾಡಿದರೂ, ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಹೋರಾಟಕ್ಕೆ ಮುಂದಾಗಿರುವ ರೈತರು ಟೋಲ್ ನಿರ್ಮಿಸಿ ಪ್ರತಿ ವಾಹನದಿಂದ ₹1 ಸಂಗ್ರಹ ಮಾಡಲು ನಿರ್ಧರಿಸಿದ್ದಾರೆ.</p>.<p>ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶ್ರೀಗಂಧ ಬೆಳೆದ 22 ಮಂದಿಯಿಂದ ಭೂಮಿ ಸ್ವಾಧೀನಪಡಿಸಿಕೊಂಡಿದೆ. ಆ ಜಾಗದ ಶ್ರೀಗಂಧದ ಮರವೊಂದಕ್ಕೆ ಕೆಎಸ್ಡಿಎಲ್ ₹ 2.44 ಲಕ್ಷ ನಿಗದಿ ಮಾಡಿದೆ. ಈ ದರ ನೀಡಲು ಹಿಂದೇಟು ಹಾಕಿದ ಪ್ರಾಧಿಕಾರ ಅರಣ್ಯ ಇಲಾಖೆ ನಿಗದಿಪಡಿಸಿರುವ ₹ 420 ಪರಿಹಾರವಾಗಿ ನೀಡಲು ಮುಂದಾಗಿದೆ ಎಂದರು.</p>.<p>ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡಲು ಪ್ರಾಧಿಕಾರ ಮೀನಾಮೇಷ ಎಣಿಸುತ್ತಿದೆ. ತೆಂಗು, ಮಾವು, ನಿಂಬೆ ಗಿಡಕ್ಕಿಂತಲೂ ಕಡಿಮೆ ಬೆಲೆಯನ್ನು ಶ್ರೀಗಂಧಕ್ಕೆ ನಿಗದಿಪಡಿಸಲಾಗಿದೆ. ಇದರಿಂದ ಸಂತ್ರಸ್ತರಿಗೆ ಅನ್ಯಾಯವಾಗಲಿದೆ ಎಂದರು.</p>.<p>ಶ್ರೀಗಂಧ ಬೆಳೆಗಾರರ ಸಂಘದ ರಾಜ್ಯ ಸಂಚಾಲಕ ಟಿ.ಎನ್ ವಿಶುಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಜ್, ಮುಖಂಡ ಓಂಕಾರಪ್ಪ, ಮೂರ್ತಿ, ಸವಿತಾ, ನವೀನ್, ಪ್ರತಾಪ್ ಕುಮಾರ್, ತಿಪ್ಪೇಶಪ್ಪ, ಕುಪ್ಪಮ್ಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>