ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಪಿ ಅಂಶುಮಂತ್ ಮಾತನಾಡಿ, ‘ತಾಲ್ಲೂಕಿನಲ್ಲಿ ಅರಣ್ಯ ಮತ್ತು ವಿವಿಧ ಪರಿಸರದ ಯೋಜನೆಗಳು ಜನರಿಗೆ ತೊಂದರೆಯಾಗುತ್ತಿದೆ. ಫಾರಂ ನಂಬ್ರ 50, 53 ಮತ್ತು 57 ಕೃಷಿ ಭೂಮಿ ಮಂಜೂರಾತಿ ಆಗುತ್ತಿಲ್ಲ. 94ಸಿ, 94ಸಿಸಿ ಯೋಜನೆಯಡಿ ವಸತಿಗೆ ಸುಮಾರು 5,500 ಅರ್ಜಿಗಳು ಹಾಕಿದ್ದರೂ, ಮಂಜೂರಾತಿಗೆ ಸೊಪ್ಪಿನಬೆಟ್ಟ ಅಡ್ಡಿಯಾಗುತ್ತಿದೆ. ಅದನ್ನು ತೆಗೆಯಲು ಆದೇಶ ನೀಡಲು ಸರ್ಕಾರ ಮೀನಮೇಷ ಎಣಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಜೆಪಿಯದ್ದೇ ಆದರೂ ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಮೌನವಾಗಿದ್ದಾರೆ' ಎಂದು ಆರೋಪಿಸಿದರು.