ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಟ್ಟಿತ್ತು. ಮುಕ್ತಾಯದ ಹಂತದಲ್ಲಿ ನೃತ್ಯ ಮಾಡಲು ಹಾಡುಗಳನ್ನು ಬದಲಾವಣೆ ಮಾಡುವ ವಿಷಯದಲ್ಲಿ ಜಗಳ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಪಕಾಳಿ ವರುಣ್ ಮೇಲೆ ಚಾಕುವಿನಿಂದ ಕೆಲವರು ದಾಳಿ ಮಾಡಿದ್ದಾರೆ. ಹೊಟ್ಟೆಯ ಭಾಗಕ್ಜೆ ಇರಿತವಾಗಿದ್ದು, ಕೂಡಲೇ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರು ಮೃತಪಟ್ಟಿದ್ದಾರೆ.