ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಸ್ಮಿಕ ಬೆಂಕಿ: ಕಾಫಿ ತೋಟ ನಾಶ

Published 18 ಏಪ್ರಿಲ್ 2024, 12:36 IST
Last Updated 18 ಏಪ್ರಿಲ್ 2024, 12:36 IST
ಅಕ್ಷರ ಗಾತ್ರ

ಕೊಟ್ಟಿಗೆಹಾರ: ಬಾಳೂರು ಹೊರಟ್ಟಿ ಗ್ರಾಮದಲ್ಲಿ ಬಿ.ಆರ್.ವಿಜೇಂದ್ರ ಎಂಬುವವರಿಗೆ ಸೇರಿದ್ದ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಕಾಫಿ, ಏಲಕ್ಕಿ, ಮೆಣಸು, ಅಡಿಕೆ ಗಿಡಗಳು ಸುಟ್ಟು ಭಸ್ಮವಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ದೂರವಾಣಿ ಕರೆ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಚುನಾವಣೆಯ ಕರ್ತವ್ಯದಲ್ಲಿ ಬೇರೆಡೆ ಇದ್ದಿದ್ದರಿಂದ ಕೂಡಲೇ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ. ಗ್ರಾಮಸ್ಥರು ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸಾಕಷ್ಟು ಬೆಳೆಹಾನಿ ಸಂಭವಿಸಿತ್ತು.

‘ಇದು ಕಂದಾಯ ಭೂಮಿಯಾಗಿರುವುದರಿಂದ  ತಹಶೀಲ್ದಾರ್ ವ್ಯಾಪ್ತಿಗೆ ಒಳಪಡುತ್ತದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರೈತರಿಗೆ ಪರಿಹಾರದ ಮೂಲಕ ನ್ಯಾಯ ಒದಗಿಸಬೇಕು’ ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT