<p><strong>ಕೊಟ್ಟಿಗೆಹಾರ</strong>: ಬಾಳೂರು ಹೊರಟ್ಟಿ ಗ್ರಾಮದಲ್ಲಿ ಬಿ.ಆರ್.ವಿಜೇಂದ್ರ ಎಂಬುವವರಿಗೆ ಸೇರಿದ್ದ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಕಾಫಿ, ಏಲಕ್ಕಿ, ಮೆಣಸು, ಅಡಿಕೆ ಗಿಡಗಳು ಸುಟ್ಟು ಭಸ್ಮವಾಗಿವೆ.</p>.<p>ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ದೂರವಾಣಿ ಕರೆ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಚುನಾವಣೆಯ ಕರ್ತವ್ಯದಲ್ಲಿ ಬೇರೆಡೆ ಇದ್ದಿದ್ದರಿಂದ ಕೂಡಲೇ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ. ಗ್ರಾಮಸ್ಥರು ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸಾಕಷ್ಟು ಬೆಳೆಹಾನಿ ಸಂಭವಿಸಿತ್ತು.</p>.<p>‘ಇದು ಕಂದಾಯ ಭೂಮಿಯಾಗಿರುವುದರಿಂದ ತಹಶೀಲ್ದಾರ್ ವ್ಯಾಪ್ತಿಗೆ ಒಳಪಡುತ್ತದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರೈತರಿಗೆ ಪರಿಹಾರದ ಮೂಲಕ ನ್ಯಾಯ ಒದಗಿಸಬೇಕು’ ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಿಗೆಹಾರ</strong>: ಬಾಳೂರು ಹೊರಟ್ಟಿ ಗ್ರಾಮದಲ್ಲಿ ಬಿ.ಆರ್.ವಿಜೇಂದ್ರ ಎಂಬುವವರಿಗೆ ಸೇರಿದ್ದ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಕಾಫಿ, ಏಲಕ್ಕಿ, ಮೆಣಸು, ಅಡಿಕೆ ಗಿಡಗಳು ಸುಟ್ಟು ಭಸ್ಮವಾಗಿವೆ.</p>.<p>ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ದೂರವಾಣಿ ಕರೆ ಮಾಡಿದ್ದಾರೆ. ಆದರೆ, ಅಧಿಕಾರಿಗಳು ಚುನಾವಣೆಯ ಕರ್ತವ್ಯದಲ್ಲಿ ಬೇರೆಡೆ ಇದ್ದಿದ್ದರಿಂದ ಕೂಡಲೇ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ. ಗ್ರಾಮಸ್ಥರು ಸೇರಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸಾಕಷ್ಟು ಬೆಳೆಹಾನಿ ಸಂಭವಿಸಿತ್ತು.</p>.<p>‘ಇದು ಕಂದಾಯ ಭೂಮಿಯಾಗಿರುವುದರಿಂದ ತಹಶೀಲ್ದಾರ್ ವ್ಯಾಪ್ತಿಗೆ ಒಳಪಡುತ್ತದೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರೈತರಿಗೆ ಪರಿಹಾರದ ಮೂಲಕ ನ್ಯಾಯ ಒದಗಿಸಬೇಕು’ ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>