ಚಿಕ್ಕಬಳ್ಳಾಪುರ: ‘ರೈತರು, ಅಧಿಕಾರಿಗಳು, ವ್ಯಾಪಾರಿಗಳನ್ನು ಒಳಗೊಂಡ ಸಭೆಯನ್ನುಸೋಮವಾರ (ನ.15) ನಡೆಸಲಾಗುವುದು. ಜಿಲ್ಲಾಡಳಿತ ಗುರುತಿಸಿರುವ ಜಮೀನು ಸೂಕ್ತವಲ್ಲ ಎಂದರೆ ನೀವು ಯಾವ ಸರ್ಕಾರಿ ಜಮೀನು ತೋರಿಸುವಿರೊ ಅಲ್ಲಿ ಮಾರುಕಟ್ಟೆಯನ್ನು ನಿರ್ಮಿಸಿಕೊಡಲಾಗುವುದು’– ಇದು 2021ರ ನವೆಂಬರ್ 13ರಂದು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ.ಕೆ.ಸುಧಾಕರ್, ಹೂ ವ್ಯಾಪಾರಿಗಳು ಮತ್ತು ರೈತರಿಗೆ ನೀಡಿದ್ದ ಭರವಸೆ.