<p><strong>ತರೀಕೆರೆ</strong>: ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ತಾಲ್ಲೂಕು ಮಟ್ಟದ ಜಾನಪದ ಸಮ್ಮೇಳನವನ್ನು ಆ.31ರಂದು ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ. ಸುರೇಶ್ ಹೇಳಿದರು.</p>.<p>ಬೆಟ್ಟತಾವರಕೆರೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಶಕ್ತಿ ಜಾನಪದಕ್ಕಿದೆ. ಭಾರತೀಯ ಆಚಾರ- ವಿಚಾರ, ಉಡುಗೆ-ತೊಡುಗೆ, ಧರ್ಮ, ಭಾಷೆ, ಆಹಾರ ಪದ್ಧತಿ, ಧಾರ್ಮಿಕ ಸಹಿಷ್ಣತೆ ಅರಿವನ್ನು ಮೂಡಿಸಬೇಕಾದರೆ ಶಾಲಾ ಕಾಲೇಜುಗಳಲ್ಲಿ ಜಾನಪದಕ್ಕೆ ಒತ್ತು ನೀಡಬೇಕಾಗಿದೆ ಎಂದರು.</p>.<p>ಸಭೆ ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಿ. ಕಲ್ಲೇಶಪ್ಪ, ಗ್ರಾಮಾಂತರ ಪ್ರದೇಶಗಳಲ್ಲಿ ಜಾನಪದ ಸಮ್ಮೇಳನ, ಕಲೋತ್ಸವ ಮತ್ತು ತರಬೇತಿ ಶಿಬಿರ, ವಿಚಾರ ಸಂಕಿರಣ, ಗೀತ ಗಾಯನ ತರಬೇತಿ ನಡೆಸಿ ಸದಭಿರುಚಿ ಮೂಡಿಸಬೇಕಾಗಿದೆ ಎಂದರು.</p>.<p>ಜಾನಪದ ಶ್ರೀ ಪ್ರಶಸ್ತಿ ಪುರಸ್ಕೃತ ಮಾಳೇನಹಳ್ಳಿ ಬಸಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ರಾಜಶೇಖರ್ ಮಾತನಾಡಿದರು. ಸಮ್ಮೇಳನದ ಅಧ್ಯಕ್ಷರನ್ನಾಗಿ ಭಜನಾ ಕಲಾವಿದ ಬಿ.ವಿ. ಜಯಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಜಿಲ್ಲಾ ಉಪಾಧ್ಯಕ್ಷ ಗೊಂಡೆದಳ್ಳಿ ತಿಪ್ಪೇಶ್, ಜಿಲ್ಲಾ ಸಂಚಾಲಕಿ ಗಾಯತ್ರಮ್ಮ,ಕಲಾವಿದ ಚಿಕ್ಕಾನವಂಗಲ ಶಂಕರಪ್ಪ, ಮರಳುಸಿದ್ದಪ್ಪ, ತ್ಯಾಗದಬಾಗಿ ದೇವರಾಜ್, ಗ್ರಾಮ ಪಂಚಾಯತಿ ಸದಸ್ಯೆ ಸುಮಿತ್ರಮ್ಮ, ಜಯಣ್ಣ, ತಿಪ್ಪೇರುದ್ರಪ್ಪ, ತಿಪ್ಪೇಶಪ್ಪ, ಮಹಾಂತೇಶ ಪಿ., ದೇವರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ತಾಲ್ಲೂಕು ಮಟ್ಟದ ಜಾನಪದ ಸಮ್ಮೇಳನವನ್ನು ಆ.31ರಂದು ತಾಲ್ಲೂಕಿನ ಬೆಟ್ಟತಾವರೆಕೆರೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಬಿ. ಸುರೇಶ್ ಹೇಳಿದರು.</p>.<p>ಬೆಟ್ಟತಾವರಕೆರೆ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಶಕ್ತಿ ಜಾನಪದಕ್ಕಿದೆ. ಭಾರತೀಯ ಆಚಾರ- ವಿಚಾರ, ಉಡುಗೆ-ತೊಡುಗೆ, ಧರ್ಮ, ಭಾಷೆ, ಆಹಾರ ಪದ್ಧತಿ, ಧಾರ್ಮಿಕ ಸಹಿಷ್ಣತೆ ಅರಿವನ್ನು ಮೂಡಿಸಬೇಕಾದರೆ ಶಾಲಾ ಕಾಲೇಜುಗಳಲ್ಲಿ ಜಾನಪದಕ್ಕೆ ಒತ್ತು ನೀಡಬೇಕಾಗಿದೆ ಎಂದರು.</p>.<p>ಸಭೆ ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಬಿ.ವಿ. ಕಲ್ಲೇಶಪ್ಪ, ಗ್ರಾಮಾಂತರ ಪ್ರದೇಶಗಳಲ್ಲಿ ಜಾನಪದ ಸಮ್ಮೇಳನ, ಕಲೋತ್ಸವ ಮತ್ತು ತರಬೇತಿ ಶಿಬಿರ, ವಿಚಾರ ಸಂಕಿರಣ, ಗೀತ ಗಾಯನ ತರಬೇತಿ ನಡೆಸಿ ಸದಭಿರುಚಿ ಮೂಡಿಸಬೇಕಾಗಿದೆ ಎಂದರು.</p>.<p>ಜಾನಪದ ಶ್ರೀ ಪ್ರಶಸ್ತಿ ಪುರಸ್ಕೃತ ಮಾಳೇನಹಳ್ಳಿ ಬಸಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ರಾಜಶೇಖರ್ ಮಾತನಾಡಿದರು. ಸಮ್ಮೇಳನದ ಅಧ್ಯಕ್ಷರನ್ನಾಗಿ ಭಜನಾ ಕಲಾವಿದ ಬಿ.ವಿ. ಜಯಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಜಿಲ್ಲಾ ಉಪಾಧ್ಯಕ್ಷ ಗೊಂಡೆದಳ್ಳಿ ತಿಪ್ಪೇಶ್, ಜಿಲ್ಲಾ ಸಂಚಾಲಕಿ ಗಾಯತ್ರಮ್ಮ,ಕಲಾವಿದ ಚಿಕ್ಕಾನವಂಗಲ ಶಂಕರಪ್ಪ, ಮರಳುಸಿದ್ದಪ್ಪ, ತ್ಯಾಗದಬಾಗಿ ದೇವರಾಜ್, ಗ್ರಾಮ ಪಂಚಾಯತಿ ಸದಸ್ಯೆ ಸುಮಿತ್ರಮ್ಮ, ಜಯಣ್ಣ, ತಿಪ್ಪೇರುದ್ರಪ್ಪ, ತಿಪ್ಪೇಶಪ್ಪ, ಮಹಾಂತೇಶ ಪಿ., ದೇವರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>