ಶೃಂಗೇರಿ, ಕಳಸ, ಹೊರನಾಡು, ಬಾಳೆಹೊನ್ನೂರು, ಶ್ರೀಗುರು ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ, ಬೆಳವಾಡಿ, ಮತ್ತೋಡಿ ನಿಸರ್ಗ ತಾಣ, ಕಲ್ಲತ್ತಿಗಿರಿ, ಕೆಮ್ಮಣ್ಣುಗುಂಡಿ, ಚಿಕ್ಕಮಗಳೂರು, ಹಿರೇಮಗಳೂರು ಜಿಲ್ಲೆಯ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು. 2014ರಿಂದ ಜಿಲ್ಲೆಗೆ ವಿದೇಶಿ ಪ್ರವಾಸಿಗರ ಭೇಟಿ ಪ್ರಮಾಣ ಇಳಿಕೆ ಕ್ರಮದಲ್ಲಿ ಸಾಗಿದೆ. ಪ್ರವಾಸಿ ಸ್ಥಳಗಳಲ್ಲಿ ಮೂಲಸೌಕರ್ಯ ಕೊರತೆ, ಅತಿವೃಷ್ಟಿ, ಸುರಕ್ಷತೆ ಸಮಸ್ಯೆ ಮೊದಲಾದ ಕಾರಣಗಳಿಂದ ಜಿಲ್ಲೆಯ ಕಡೆಗೆ ವಿದೇಶಿ ಪ್ರವಾಸಿಗರ ಲಕ್ಷ್ಯ ಕಡಿಮೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.