<p><strong>ಮೂಡಿಗೆರೆ</strong> (ಚಿಕ್ಕಮಗಳೂರು): ‘ಪ್ರೆಸ್’ ಎಂದು ಬರೆಸಿದ್ದ ಬೈಕ್ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಹಾಸನದಿಂದ ಪ್ರಕಟವಾಗುವ ಸ್ಥಳೀಯ ಪತ್ರಿಕೆಯ ವರದಿಗಾರ ಸೇರಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಹಂಡಗುಳಿ ಮೂಲದ, ಪಟ್ಟಣ ನಿವಾಸಿ ಪತ್ರಕರ್ತ ಎಚ್.ಆರ್.ಮನ್ಸೂರ್ ಹಾಗೂ ಹ್ಯಾಂಡ್ ಪೋಸ್ಟ್ ಬಳಿಯ ನಿವಾಸಿ ಎಂ.ಕೆ. ಯೂಸೂಫ್ ಬಂಧಿತರು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ತಾಲ್ಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್ನಲ್ಲಿ ಇಬ್ಬರು ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ, ಬೈಕನ್ನು ಬೆನ್ನಟ್ಟಿ ಹಿಡಿದು ಪರಿಶೀಲಿಸಿದಾಗ, ಶ್ರೀಗಂಧದ 8 ತುಂಡುಗಳು ಪತ್ತೆಯಾಗಿದವು. ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಶ್ರೀಗಂಧವನ್ನೂ ವಶಕ್ಕೆ ಪಡೆದಿದ್ದಾರೆ.</p>.<p>ಆರೋಪಿಗಳನ್ನು ಗುರುವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್, ಡಿಆರ್ಎಫ್ಒ ಅಶ್ವತ್ಥ್, ಸಿಬ್ಬಂದಿ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್ ನವರಾಜ್, ಭಾಗವಹಿಸಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong> (ಚಿಕ್ಕಮಗಳೂರು): ‘ಪ್ರೆಸ್’ ಎಂದು ಬರೆಸಿದ್ದ ಬೈಕ್ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಆರೋಪದಲ್ಲಿ ಹಾಸನದಿಂದ ಪ್ರಕಟವಾಗುವ ಸ್ಥಳೀಯ ಪತ್ರಿಕೆಯ ವರದಿಗಾರ ಸೇರಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಹಂಡಗುಳಿ ಮೂಲದ, ಪಟ್ಟಣ ನಿವಾಸಿ ಪತ್ರಕರ್ತ ಎಚ್.ಆರ್.ಮನ್ಸೂರ್ ಹಾಗೂ ಹ್ಯಾಂಡ್ ಪೋಸ್ಟ್ ಬಳಿಯ ನಿವಾಸಿ ಎಂ.ಕೆ. ಯೂಸೂಫ್ ಬಂಧಿತರು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ತಾಲ್ಲೂಕಿನ ಹಂಡುಗುಳಿ ಸಮೀಪದ ನವಗ್ರಾಮದ ಬಳಿ ಬುಧವಾರ ರಾತ್ರಿ ಬೈಕ್ನಲ್ಲಿ ಇಬ್ಬರು ಶ್ರೀಗಂಧ ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಅರಣ್ಯಾಧಿಕಾರಿಗಳ ತಂಡ, ಬೈಕನ್ನು ಬೆನ್ನಟ್ಟಿ ಹಿಡಿದು ಪರಿಶೀಲಿಸಿದಾಗ, ಶ್ರೀಗಂಧದ 8 ತುಂಡುಗಳು ಪತ್ತೆಯಾಗಿದವು. ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ಶ್ರೀಗಂಧವನ್ನೂ ವಶಕ್ಕೆ ಪಡೆದಿದ್ದಾರೆ.</p>.<p>ಆರೋಪಿಗಳನ್ನು ಗುರುವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಜಿ.ಮಂಜುನಾಥ್, ಡಿಆರ್ಎಫ್ಒ ಅಶ್ವತ್ಥ್, ಸಿಬ್ಬಂದಿ ಜೆ.ಜಿ.ಉಮೇಶ್, ಎ.ಎಸ್.ಸುರೇಶ್, ಸುಮಂತ್ ನವರಾಜ್, ಭಾಗವಹಿಸಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>