<p><strong>ಶೃಂಗೇರಿ</strong>: ‘ಅರಣ್ಯ ಉಳಿಸಲು ಪ್ರಾಮಾಣಿಕ ಪ್ರಯತ್ನ ಅಗತ್ಯವಾಗಿದ್ದು, ಅರಣ್ಯ ಸಂರಕ್ಷಣೆಗೆ ಕಾನೂನು ಇದ್ದರೂ ಅರಣ್ಯ ನಾಶ ಮುಂದುವರೆದಿದೆ’ ಎಂದು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್ ವಿಷಾದ ವ್ಯಕ್ತಪಡಿಸಿದರು.</p>.<p>ಶೃಂಗೇರಿಯ ಜೆ.ಸಿ.ಬಿ.ಎಂ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಆಯೋಜಿಸಿದ ‘ಅರಣ್ಯ ಸಂರಕ್ಷಣೆಯ ಕಾನೂನು ಅರಿವು–ನೆರವು ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪಟ್ಟಣ, ನಗರ ಬೆಳೆಯುತ್ತಿದ್ದಂತೆ ಸುತ್ತಲಿನ ಅರಣ್ಯ ನಾಶವಾಗುತ್ತಿದೆ. ಕೈಗಾರಿಕೆ ವಿಸ್ತರಣೆ, ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ನಿರಂತರವಾಗಿ ನಡೆಯುತ್ತಿದೆ. ಅರಣ್ಯ ನಾಶಕ್ಕೆ ಸರಿಯಾಗಿ ಗಿಡ ನೆಡುವ ಕಾರ್ಯಕ್ರಮವಾಗದೆ ಅರಣ್ಯ ಬೆಳವಣಿಗೆ ಕುಂಠಿತವಾಗಿದೆ ಎಂದರು.</p>.<p>ಅರಣ್ಯ ಕಾಯ್ದೆ ಬಗ್ಗೆ ವಕೀಲ ಕೆ.ಆರ್ಸುರೇಶ್ ಮಾತನಾಡಿ, ‘ಅರಣ್ಯ ಕಾಯ್ದೆ ಪ್ರಬಲವಾಗಿದ್ದು, ಅಕ್ರಮ ಕಾಡು ಕಡಿತ ತಪ್ಪಿಸಲು ಕಾನೂನು ಇದೆ. ರೈತರು ತಮ್ಮ ಜಮೀನಿನಲ್ಲಿರುವ ಕಾಡು ಮರ ಕಡಿಯಲು ಇಲಾಖೆ ಅನುಮತಿ ಪಡೆಯುವುದು ಅಗತ್ಯ’ ಎಂದರು.</p>.<p>ಪ್ರಾಧ್ಯಾಪಕ ವಿದ್ಯಾಧರ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಮಹೇಶ್, ಕಾಲೇಜಿನ ಪಿ.ಯು ವಿಭಾಗದ ಪ್ರಾಂಶುಪಾಲ ಎ.ಜಿ ಪ್ರಶಾಂತ್, ಸಂತೋಷ್ ಕುಮಾರ್, ವಲಯ ಅರಣ್ಯಾಧಿಕಾರಿ ಮಧುಕರ್, ಶೃತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ‘ಅರಣ್ಯ ಉಳಿಸಲು ಪ್ರಾಮಾಣಿಕ ಪ್ರಯತ್ನ ಅಗತ್ಯವಾಗಿದ್ದು, ಅರಣ್ಯ ಸಂರಕ್ಷಣೆಗೆ ಕಾನೂನು ಇದ್ದರೂ ಅರಣ್ಯ ನಾಶ ಮುಂದುವರೆದಿದೆ’ ಎಂದು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಜೀತು ಆರ್.ಎಸ್ ವಿಷಾದ ವ್ಯಕ್ತಪಡಿಸಿದರು.</p>.<p>ಶೃಂಗೇರಿಯ ಜೆ.ಸಿ.ಬಿ.ಎಂ ಕಾಲೇಜಿನಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಆಯೋಜಿಸಿದ ‘ಅರಣ್ಯ ಸಂರಕ್ಷಣೆಯ ಕಾನೂನು ಅರಿವು–ನೆರವು ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪಟ್ಟಣ, ನಗರ ಬೆಳೆಯುತ್ತಿದ್ದಂತೆ ಸುತ್ತಲಿನ ಅರಣ್ಯ ನಾಶವಾಗುತ್ತಿದೆ. ಕೈಗಾರಿಕೆ ವಿಸ್ತರಣೆ, ರಸ್ತೆ ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ನಿರಂತರವಾಗಿ ನಡೆಯುತ್ತಿದೆ. ಅರಣ್ಯ ನಾಶಕ್ಕೆ ಸರಿಯಾಗಿ ಗಿಡ ನೆಡುವ ಕಾರ್ಯಕ್ರಮವಾಗದೆ ಅರಣ್ಯ ಬೆಳವಣಿಗೆ ಕುಂಠಿತವಾಗಿದೆ ಎಂದರು.</p>.<p>ಅರಣ್ಯ ಕಾಯ್ದೆ ಬಗ್ಗೆ ವಕೀಲ ಕೆ.ಆರ್ಸುರೇಶ್ ಮಾತನಾಡಿ, ‘ಅರಣ್ಯ ಕಾಯ್ದೆ ಪ್ರಬಲವಾಗಿದ್ದು, ಅಕ್ರಮ ಕಾಡು ಕಡಿತ ತಪ್ಪಿಸಲು ಕಾನೂನು ಇದೆ. ರೈತರು ತಮ್ಮ ಜಮೀನಿನಲ್ಲಿರುವ ಕಾಡು ಮರ ಕಡಿಯಲು ಇಲಾಖೆ ಅನುಮತಿ ಪಡೆಯುವುದು ಅಗತ್ಯ’ ಎಂದರು.</p>.<p>ಪ್ರಾಧ್ಯಾಪಕ ವಿದ್ಯಾಧರ್ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಮಹೇಶ್, ಕಾಲೇಜಿನ ಪಿ.ಯು ವಿಭಾಗದ ಪ್ರಾಂಶುಪಾಲ ಎ.ಜಿ ಪ್ರಶಾಂತ್, ಸಂತೋಷ್ ಕುಮಾರ್, ವಲಯ ಅರಣ್ಯಾಧಿಕಾರಿ ಮಧುಕರ್, ಶೃತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>