<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ತಾಲ್ಲೂಕಿನಲ್ಲಿ ಹಾದುಹೋಗಿರುವ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಕಾಳ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ.</p>.<p>ಬಿದಿರುತಳ ಗ್ರಾಮದ ಬಸ್ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ ದೂರದಲ್ಲಿ ರಾತ್ರಿ 11ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು, ಎರಡು ಗಂಟೆಗೂ ಹೆಚ್ಚು ಕಾಲ ಉರಿಯುತ್ತಲೇ ಇತ್ತು.</p>.<p>ಘಾಟಿಯ ರಸ್ತೆಯುದ್ದಕ್ಕೂ ಜ್ವಾಲೆ ಕಾಣುತ್ತಿದ್ದು, ಪ್ರಯಾಣಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ರಾತ್ರಿ 12.30ರ ಸುಮಾರಿಗೆ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿದರೂ ಬೆಂಕಿಯ ಜ್ವಾಲೆ ತೀವ್ರವಾಗಿದ್ದರಿಂದ ನಂದಿಸುವ ಕಾರ್ಯ ಪೂರ್ಣವಾಗಿರಲಿಲ್ಲ.</p>.<p>ಬೆಂಕಿ ಕಾಣಿಸಿಕೊಂಡ ಸ್ಥಳ ಗುಡ್ಡ ಪ್ರದೇಶವಾಗಿದ್ದು, ಅಗ್ನಿಶಾಮಕ ದಳದ ವಾಹನವು ಸ್ಥಳಕ್ಕೆ ತೆರಳಲು ಆಗದೇ ಬೆಂಕಿನಂದಿಸುವ ಕಾರ್ಯಕ್ಕೆ ಅಡ್ಡಿ ಆಯಿತು. ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಕಾಲ್ನಡಿಗೆಯಲ್ಲೇ ಸಾಗಿ ಬೆಳಿಗ್ಗೆಯ ವೇಳೆಗೆ ಬೆಂಕಿ ನಂದಿಸಿದರು ಎಂದು ಸಿಬ್ಬಂದಿ ಮಾಹಿತಿ ನೀಡಿದರು.</p>.<p>ಅಪಾರ ಪ್ರಮಾಣದ ಅರಣ್ಯ ಸಂಪತ್ತು ಹಾಗೂ ವನ್ಯಪ್ರಾಣಿಗಳಿಗೆ ಹಾನಿಯಾಗಿರುವ ಸಾಧ್ಯತೆಯಿದೆ. ಬೆಂಕಿಗೆ ನಿಖರ ಕಾರಣ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ತಾಲ್ಲೂಕಿನಲ್ಲಿ ಹಾದುಹೋಗಿರುವ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಕಾಳ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ.</p>.<p>ಬಿದಿರುತಳ ಗ್ರಾಮದ ಬಸ್ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ ದೂರದಲ್ಲಿ ರಾತ್ರಿ 11ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು, ಎರಡು ಗಂಟೆಗೂ ಹೆಚ್ಚು ಕಾಲ ಉರಿಯುತ್ತಲೇ ಇತ್ತು.</p>.<p>ಘಾಟಿಯ ರಸ್ತೆಯುದ್ದಕ್ಕೂ ಜ್ವಾಲೆ ಕಾಣುತ್ತಿದ್ದು, ಪ್ರಯಾಣಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ರಾತ್ರಿ 12.30ರ ಸುಮಾರಿಗೆ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿದರೂ ಬೆಂಕಿಯ ಜ್ವಾಲೆ ತೀವ್ರವಾಗಿದ್ದರಿಂದ ನಂದಿಸುವ ಕಾರ್ಯ ಪೂರ್ಣವಾಗಿರಲಿಲ್ಲ.</p>.<p>ಬೆಂಕಿ ಕಾಣಿಸಿಕೊಂಡ ಸ್ಥಳ ಗುಡ್ಡ ಪ್ರದೇಶವಾಗಿದ್ದು, ಅಗ್ನಿಶಾಮಕ ದಳದ ವಾಹನವು ಸ್ಥಳಕ್ಕೆ ತೆರಳಲು ಆಗದೇ ಬೆಂಕಿನಂದಿಸುವ ಕಾರ್ಯಕ್ಕೆ ಅಡ್ಡಿ ಆಯಿತು. ಅರಣ್ಯ ಇಲಾಖೆ, ಅಗ್ನಿಶಾಮಕ ಸಿಬ್ಬಂದಿ ಕಾಲ್ನಡಿಗೆಯಲ್ಲೇ ಸಾಗಿ ಬೆಳಿಗ್ಗೆಯ ವೇಳೆಗೆ ಬೆಂಕಿ ನಂದಿಸಿದರು ಎಂದು ಸಿಬ್ಬಂದಿ ಮಾಹಿತಿ ನೀಡಿದರು.</p>.<p>ಅಪಾರ ಪ್ರಮಾಣದ ಅರಣ್ಯ ಸಂಪತ್ತು ಹಾಗೂ ವನ್ಯಪ್ರಾಣಿಗಳಿಗೆ ಹಾನಿಯಾಗಿರುವ ಸಾಧ್ಯತೆಯಿದೆ. ಬೆಂಕಿಗೆ ನಿಖರ ಕಾರಣ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>