<p><strong>ಚಿಕ್ಕಮಗಳೂರು</strong>: ಅರಣ್ಯ ಜಾಗ ಒತ್ತುವರಿಯಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಲಯ ಅರಣ್ಯಾಧಿಕಾರಿ, ಮೋಜಣಿದಾರ ಎಸ್.ಶಿವರುದ್ರಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.</p>.<p>ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ್ ಪಂವಾರ್ ಅವರು ಆಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.</p>.<p>ಕೊಪ್ಪ ತಾಲ್ಲೂಕಿನ ಅಸಗೋಡಿನ ಸರ್ವೆ ನಂ 227ರ ಸೆಕ್ಷನ್–4 ಅಧಿಸೂಚಿತ ಅರಣ್ಯ ಜಾಗವನ್ನು ಒತ್ತುವರಿ ಮಾಡಿ ಬೇಲಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ, ಇತರ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿದ್ದಾರೆ. ಪ್ರಕರಣದಲ್ಲಿ ಶಿವರುದ್ರಪ್ಪ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಶಿವರುದ್ರಪ್ಪ ಅವರು ಪ್ರಸ್ತುತ ಕೊಗ್ರೆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಶಂಗೇರಿ ವಲಯದ ಕಸಬಾ ಶಾಖೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಅರಣ್ಯ ಜಾಗ ಒತ್ತುವರಿಯಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪವಲಯ ಅರಣ್ಯಾಧಿಕಾರಿ, ಮೋಜಣಿದಾರ ಎಸ್.ಶಿವರುದ್ರಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.</p>.<p>ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸುನೀಲ್ ಪಂವಾರ್ ಅವರು ಆಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.</p>.<p>ಕೊಪ್ಪ ತಾಲ್ಲೂಕಿನ ಅಸಗೋಡಿನ ಸರ್ವೆ ನಂ 227ರ ಸೆಕ್ಷನ್–4 ಅಧಿಸೂಚಿತ ಅರಣ್ಯ ಜಾಗವನ್ನು ಒತ್ತುವರಿ ಮಾಡಿ ಬೇಲಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ, ಇತರ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿದ್ದಾರೆ. ಪ್ರಕರಣದಲ್ಲಿ ಶಿವರುದ್ರಪ್ಪ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಶಿವರುದ್ರಪ್ಪ ಅವರು ಪ್ರಸ್ತುತ ಕೊಗ್ರೆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಶಂಗೇರಿ ವಲಯದ ಕಸಬಾ ಶಾಖೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>