ಕೊಪ್ಪ ತಾಲ್ಲೂಕಿನ ಅಸಗೋಡಿನ ಸರ್ವೆ ನಂ 227ರ ಸೆಕ್ಷನ್–4 ಅಧಿಸೂಚಿತ ಅರಣ್ಯ ಜಾಗವನ್ನು ಒತ್ತುವರಿ ಮಾಡಿ ಬೇಲಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ, ಇತರ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿದ್ದಾರೆ. ಪ್ರಕರಣದಲ್ಲಿ ಶಿವರುದ್ರಪ್ಪ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.