ದೂರಿನಲ್ಲಿ ಏನಿದೆ?: ಮೇ 11ರಂದು ಚಿಕ್ಕಮಗಳೂರು, ಬೇಲೂರಿನ ಅಂಗಡಿಗಳಿಗೆ ಆಭರಣ ತಲುಪಿಸಲು ದಾವಣಗರೆಯಿಂದ ಕಾರಿನಲ್ಲಿ ಸಾಗುವಾಗ ಬುಕ್ಕಾಂಬುಧಿ ಸಮೀಪ ಟೋಲ್ ಗೇಟ್ ಸನಿಹ ಇಬ್ಬರು ತಡೆದರು. ಕಾರಿನೊಳಗೆ ಕುಳಿತರು. ಇನ್ಸ್ಪೆಕ್ಟರ್ ಜೀಪು ಇದ್ದಲ್ಲಿಗೆ ಕರೆದೊಯ್ದರು. ಇನ್ಸ್ಪೆಕ್ಟರ್ ಲಿಂಗರಾಜು ಕಾರಿನೊಳಗೆ ಕುಳಿತರು. ಮೊಬೈಲ್ ಫೋನ್ ಕಿತ್ತುಕೊಂಡರು, ಕಾರಿನಲ್ಲಿ ಏನಿದೆ ವಿಚಾರಿಸಿದರು. ಬಂಗಾರದ ಆಭರಣ ಇದೆ, ಬೇಲೂರು, ಚಿಕ್ಕಮಗಳೂರು ಅಂಗಡಿಗಳಿಗೆ ತಲುಪಿಸಲು ಒಯ್ಯುತ್ತಿರುವುದಾಗಿ ತಿಳಿಸಿ, ಜಿಎಸ್ಟಿ ಬಿಲ್ಗಳನ್ನು ಪೊಲೀಸರಿಗೆ ನೀಡಿದೆ.