ತಾಲ್ಲೂಕಿನ ನೀರುಗಂಡಿ ಗ್ರಾಮದ ಬಳಿ ಎಸ್ಎಲ್ಆರ್ ಕಾಫಿ ಕ್ಯೂರಿಂಗ್ ಆವರಣದಲ್ಲಿ ಸಾವಿರಾರು ಮಂದಿ ಪಾದಯಾತ್ರಿಗಳು ಉಳಿದುಕೊಳ್ಳವಷ್ಟು ಶಾಮಿಯಾನ ವ್ಯವಸ್ಥೆಯನ್ನು ಕಲ್ಪಿಸಿ, ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಿ ವಿಶ್ರಾಂತಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ನಾಲ್ಕು ದಿನಗಳ ಕಾಲ ಹಗಲಿರುಳು ನಡೆದ ಈ ಸೇವಾ ಕಾರ್ಯದಲ್ಲಿ, ಪಾದಯಾತ್ರಿಗಳಿಗೆ ಆರೋಗ್ಯ ತಪಾಸಣೆ, ಚಿಕಿತ್ಸೆ, ಅನ್ನ ದಾಸೋಹವನ್ನು ನಿರಂತರವಾಗಿ ನಡೆಸಲಾಯಿತು.