ತರೀಕೆರೆ: ಮಹಾತ್ಮ ಗಾಂಧಿ ಅವರ ಆಶಯದಂತೆ ನಾವು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪಟ್ಟಣದ ಪುರಸಭೆ ಸ್ವಚ್ಛತೆಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.
ತಾಲ್ಲೂಕು ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಅವರ ಭಾವಚಿತ್ರಗಳಿಗೆ ನಮನ ಸಲ್ಲಿಸಿ ಮಾತನಾಡಿದರು.
‘ಗಾಂಧಿ ಸ್ವಚ್ಛತೆಗೆ ಆದ್ಯತೆ ನೀಡಿದರೆ, ಲಾಲ್ ಬಹದ್ದೂರ್ ಶಾಸ್ತಿ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಒತ್ತು ನೀಡಿದರು ಎಂದರು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಟಿ.ಎಸ್.ಗಣೇಶ್ ಉಪನ್ಯಾಸ ನೀಡಿ, ಗಾಂಧೀಜಿ ತತ್ವಗಳು ಇಂದಿಗೂ ಪ್ರಸುತ್ತ. ಅವರ ಆದರ್ಶಗಳನ್ನು ನಾವು ಆಡಳಿತದಲ್ಲಿ ಅನುಸರಿಸಬೇಕು ಎಂದರು.
ತಹಶೀಲ್ದಾರ್ ಪೂರ್ಣಿಮಾ, ಇಒ ಗೀತಾ ಶಂಕರ್ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ಮಹಂತೇಶ್, ಉಪ ತಹಶೀಲ್ದಾರ್ ಗೋವಿಂದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಹೂನ್ನೇಶ್ ಕುಮಾರ್, ತಾಲ್ಲೂಕು ಆರೋಗ್ಯಧಿಕಾರಿ ಚಂದ್ರಶೇಖರ್, ತೋಟಗಾರಿಕೆ ಸಹಾಯಕ ನಿರ್ದೇಶಕ ಯತಿರಾಜ್, ಕೃಷಿ ಸಹಾಯಕ ನಿರ್ದೇಶಕ ರಮೇಶ್ ಇದ್ದರು.