<p><strong>ಬೀರೂರು</strong>: ಸತ್ಯ, ಅಹಿಂಸೆ ಮತ್ತು ಸರಳತೆಯ ಬದುಕಿನ ಮೂಲಕ ಸ್ವಾತಂತ್ರ್ಯ ಚಳವಳಿಯ ನೇತೃತ್ವ ವಹಿಸಿದ ಮಹಾತ್ಮ ಗಾಂಧಿ ಅವರ ಜೀವನ ಎಲ್ಲರಿಗೂ ಮಾದರಿ ಎಂದು ಪುರಸಭಾಧ್ಯಕ್ಷ ಎಂ.ಪಿ.ಸುದರ್ಶನ್ ಹೇಳಿದರು.</p>.<p>ಪುರಸಭೆ ಸಭಾಂಗಣದಲ್ಲಿ ಭಾನುವಾರ 153ನೇ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್.ಮೋಹನ್ ಕುಮಾರ್ ಮಾತನಾಡಿ, ‘ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೆ ಶಾಶ್ವತವಾಗಿರುವ ಹೆಸರು ಅಂದರೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರದು. ಒಬ್ಬರು ಶಾಂತಿ ಪಥ ಅನುಸರಿಸಿದರೆ, ಮತ್ತೊಬ್ಬರು ಸರಳತೆ ಮತ್ತು ಪ್ರಾಮಾಣಿಕತೆಗಾಗಿ ಜೀವನ ಮುಡಿಪಾಗಿಟ್ಟರು. ಈ ಎರಡು ಧ್ರುವತಾರೆಗಳ ಮಾರ್ಗ ಎಂದಿಗೂ ಪ್ರಸ್ತುತ’ ಎಂದರು.</p>.<p>ನಾಮನಿರ್ದೇಶನ ಸದಸ್ಯ ಮಲ್ಲಿಕಾರ್ಜುನ್, ಮುಖ್ಯಾಧಿಕಾರಿ ಮಂಜಪ್ಪ, ಸದಸ್ಯರಾದ ಲೋಕೇಶಪ್ಪ, ಸುಮಿತ್ರ ಮಾತನಾಡಿದರು.</p>.<p>ಉಪಾಧ್ಯಕ್ಷೆ ಮೀನಾಕ್ಷಮ್ಮ, ಸದಸ್ಯರಾದ ಎನ್.ಎಂ.ನಾಗರಾಜ್, ಶ್ರೀಧರ್, ರಘು, ಮಾನಿಕ್ ಬಾಷಾ ಮತ್ತು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಲಕ್ಷ್ಮಣ್, ಕಂದಾಯ ಅಧಿಕಾರಿ ಯೋಗೀಶ್, ಕಂದಾಯ ನಿರೀಕ್ಷಕಿ ಶ್ವೇತಾ, ಗಿರಿರಾಜ್, ತಮ್ಮಣ್ಣ ಮತ್ತು ಸಿಬ್ಬಂದಿ ಇದ್ದರು.</p>.<p>ಕಾಂಗ್ರೆಸ್ನಿಂದ ಆಚರಣೆ: ಬೀರೂರು ಮತ್ತು ಕಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗಾಂಧಿ ಜಯಂತಿ ಆಚರಿಸಲಾಯಿತು.</p>.<p>ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ವಿನಾಯಕ, ಕಡೂರು ಮತ್ತು ಬೀರೂರು ಬ್ಲಾಕ್ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಾಸಯ್ಯನ ಗುತ್ತಿ ಚಂದ್ರಪ್ಪ, ಮನು, ಪ್ರದೀಪ್, ಭೀಮಪ್ಪ, ರುದ್ರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀರೂರು</strong>: ಸತ್ಯ, ಅಹಿಂಸೆ ಮತ್ತು ಸರಳತೆಯ ಬದುಕಿನ ಮೂಲಕ ಸ್ವಾತಂತ್ರ್ಯ ಚಳವಳಿಯ ನೇತೃತ್ವ ವಹಿಸಿದ ಮಹಾತ್ಮ ಗಾಂಧಿ ಅವರ ಜೀವನ ಎಲ್ಲರಿಗೂ ಮಾದರಿ ಎಂದು ಪುರಸಭಾಧ್ಯಕ್ಷ ಎಂ.ಪಿ.ಸುದರ್ಶನ್ ಹೇಳಿದರು.</p>.<p>ಪುರಸಭೆ ಸಭಾಂಗಣದಲ್ಲಿ ಭಾನುವಾರ 153ನೇ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ 118ನೇ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್.ಮೋಹನ್ ಕುಮಾರ್ ಮಾತನಾಡಿ, ‘ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೆ ಶಾಶ್ವತವಾಗಿರುವ ಹೆಸರು ಅಂದರೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರದು. ಒಬ್ಬರು ಶಾಂತಿ ಪಥ ಅನುಸರಿಸಿದರೆ, ಮತ್ತೊಬ್ಬರು ಸರಳತೆ ಮತ್ತು ಪ್ರಾಮಾಣಿಕತೆಗಾಗಿ ಜೀವನ ಮುಡಿಪಾಗಿಟ್ಟರು. ಈ ಎರಡು ಧ್ರುವತಾರೆಗಳ ಮಾರ್ಗ ಎಂದಿಗೂ ಪ್ರಸ್ತುತ’ ಎಂದರು.</p>.<p>ನಾಮನಿರ್ದೇಶನ ಸದಸ್ಯ ಮಲ್ಲಿಕಾರ್ಜುನ್, ಮುಖ್ಯಾಧಿಕಾರಿ ಮಂಜಪ್ಪ, ಸದಸ್ಯರಾದ ಲೋಕೇಶಪ್ಪ, ಸುಮಿತ್ರ ಮಾತನಾಡಿದರು.</p>.<p>ಉಪಾಧ್ಯಕ್ಷೆ ಮೀನಾಕ್ಷಮ್ಮ, ಸದಸ್ಯರಾದ ಎನ್.ಎಂ.ನಾಗರಾಜ್, ಶ್ರೀಧರ್, ರಘು, ಮಾನಿಕ್ ಬಾಷಾ ಮತ್ತು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಲಕ್ಷ್ಮಣ್, ಕಂದಾಯ ಅಧಿಕಾರಿ ಯೋಗೀಶ್, ಕಂದಾಯ ನಿರೀಕ್ಷಕಿ ಶ್ವೇತಾ, ಗಿರಿರಾಜ್, ತಮ್ಮಣ್ಣ ಮತ್ತು ಸಿಬ್ಬಂದಿ ಇದ್ದರು.</p>.<p>ಕಾಂಗ್ರೆಸ್ನಿಂದ ಆಚರಣೆ: ಬೀರೂರು ಮತ್ತು ಕಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗಾಂಧಿ ಜಯಂತಿ ಆಚರಿಸಲಾಯಿತು.</p>.<p>ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ವಿನಾಯಕ, ಕಡೂರು ಮತ್ತು ಬೀರೂರು ಬ್ಲಾಕ್ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಾಸಯ್ಯನ ಗುತ್ತಿ ಚಂದ್ರಪ್ಪ, ಮನು, ಪ್ರದೀಪ್, ಭೀಮಪ್ಪ, ರುದ್ರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>