ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾವೈಕ್ಯ ಸಾರಿದ ಹಿಂದೂ ಮಹಾಸಭಾ ಗಣಪತಿ 

Last Updated 8 ಸೆಪ್ಟೆಂಬರ್ 2022, 8:32 IST
ಅಕ್ಷರ ಗಾತ್ರ

ತರೀಕೆರೆ: ದೇಶದ ಏಕತೆಗಾಗಿ ಸೌಹರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸೋಣ ಎಂದು ಹಿಂದೂ ಮಹಾಸಭಾ ಗಣಪತಿ ಸಮಿತಿಯ ಗೌರವಧ್ಯಕ್ಷ ಕೆ.ಎಚ್. ಮಹೇಂದ್ರ ಹೇಳಿದರು.

ಪಟ್ಟಣದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಅಂಗವಾಗಿ ಮುಸ್ಲಿಂ ಬಾಂಧವರೂಂದಿಗೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಪೋಲಿಸ್ ರಕ್ಷಣೆಯಿಲ್ಲದೆ ಗಣೇಶ ಹಬ್ಬವನ್ನು ಆಚರಿಸೋಣ ಎಂದರು.

ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್ ಮಾತನಾಡಿ, ಹಿಂದೂ-ಮುಸ್ಲಿಂ ಹಬ್ಬಗಳು ಭಾವ್ಯಕ್ಯ ಸಂದೇಶ ನೀಡಬೇಕು. ದೇಶದಲ್ಲಿ ಶಾಂತಿ ನೆಲಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಫಾರೂಕ್, ಮುಸ್ಲಿಂ ಮುಖಂಡರಾದ ಅದಿಲ್ ಪಾಷ, ಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಮಂಜು, ರಘು, ಶ್ರೇಯಸ್, ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT