<p>ಬಾಳೆಹೊನ್ನೂರು: ಇಲ್ಲಿನ ಕಲಾರಂಗ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಿದ್ದ 64ನೇ ವರ್ಷದ ವಿದ್ಯಾಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ 400ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.</p>.<p>ಜಿಲ್ಲೆಯಲ್ಲೇ ಅತಿದೊಡ್ಡ ಗಣೇಶ ಉತ್ಸವ ಇದಾಗಿದ್ದು, ವಿವಿಧೆಡೆಯಿಂದ 15 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಮಧ್ಯಾಹ್ನದ ನಂತರ ಪಟ್ಟಣದ ಮುಖ್ಯ ಮಾರ್ಗದಲ್ಲಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ.</p>.<p class="Subhead">ಮದ್ಯ ಮಾರಾಟ ನಿಷೇಧ: ಬಾಳೆಹೊನ್ನೂರಿನಲ್ಲಿ ವಿನಾಯಕ ಸೇವಾ ಸಮಿತಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ಮೆರವಣಿಗೆ ಮತ್ತು ವಿಸರ್ಜನೆ ನಿಮಿತ್ತ ಇದೇ 16ರಂದು ಬಾಳೆಹೊನ್ನೂರು ಪಟ್ಟಣ ಭಾಗದಲ್ಲಿ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.</p>.<p>ಶಾಂತಿ, ಸುವ್ಯವಸ್ಥೆ ನಿಟ್ಟಿನಲ್ಲಿ 16ರಂದು ಬೆಳಿಗ್ಗೆ 6ರಿಂದ 17ರಂದು ಬೆಳಿಗ್ಗೆ 6 ಗಂಟೆವರೆಗೆ ಬಾಳೆಹೊನ್ನೂರು ಮತ್ತು ಸುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಣೆಯನ್ನು ನಿಷೇಧಿಸಲಾಗಿದೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಳೆಹೊನ್ನೂರು: ಇಲ್ಲಿನ ಕಲಾರಂಗ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಿದ್ದ 64ನೇ ವರ್ಷದ ವಿದ್ಯಾಗಣಪತಿ ವಿಸರ್ಜನಾ ಮಹೋತ್ಸವ ಶುಕ್ರವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ 400ಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.</p>.<p>ಜಿಲ್ಲೆಯಲ್ಲೇ ಅತಿದೊಡ್ಡ ಗಣೇಶ ಉತ್ಸವ ಇದಾಗಿದ್ದು, ವಿವಿಧೆಡೆಯಿಂದ 15 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಮಧ್ಯಾಹ್ನದ ನಂತರ ಪಟ್ಟಣದ ಮುಖ್ಯ ಮಾರ್ಗದಲ್ಲಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ.</p>.<p class="Subhead">ಮದ್ಯ ಮಾರಾಟ ನಿಷೇಧ: ಬಾಳೆಹೊನ್ನೂರಿನಲ್ಲಿ ವಿನಾಯಕ ಸೇವಾ ಸಮಿತಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ಮೆರವಣಿಗೆ ಮತ್ತು ವಿಸರ್ಜನೆ ನಿಮಿತ್ತ ಇದೇ 16ರಂದು ಬಾಳೆಹೊನ್ನೂರು ಪಟ್ಟಣ ಭಾಗದಲ್ಲಿ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ.</p>.<p>ಶಾಂತಿ, ಸುವ್ಯವಸ್ಥೆ ನಿಟ್ಟಿನಲ್ಲಿ 16ರಂದು ಬೆಳಿಗ್ಗೆ 6ರಿಂದ 17ರಂದು ಬೆಳಿಗ್ಗೆ 6 ಗಂಟೆವರೆಗೆ ಬಾಳೆಹೊನ್ನೂರು ಮತ್ತು ಸುತ್ತಲಿನ 15 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಣೆಯನ್ನು ನಿಷೇಧಿಸಲಾಗಿದೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>