<p><strong>ಬೀರೂರು/ಕಡೂರು:</strong> ಬೀರೂರಿನಿಂದ ಲಿಂಗದಹಳ್ಳಿಗೆ ಹೋಗುವ ರಸ್ತೆಯ ತಿರುವಲ್ಲಿ ಮಂಗಳವಾರ ಸಂಜೆ ಎಚ್.ಪಿ.ಕಂಪನಿಯ ಗ್ಯಾಸ್ ಟ್ಯಾಂಕರ್ ಉರುಳಿಬಿದ್ದು ಆತಂಕಕ್ಕೆ ಕಾರಣವಾಯಿತು. </p>.<p>ಸಂಜೆ ಆರು ಗಂಟೆ ಸುಮಾರಿಗೆ ರಸ್ತೆ ತಿರುವಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿದೆ. ಟ್ಯಾಂಕರ್ನಿಂದ ಅನಿಲ ಸೋರಿಕೆ ಆಗುತ್ತಿದ್ದು, ಸ್ಥಳದಲ್ಲಿ ಅಗ್ನಿ ಶಾಮಕ, ಮೆಸ್ಕಾಂ ಸಿಬ್ಬಂದಿ ಬಿಟ್ಟಿದ್ದಾರೆ. ಆ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಬೀರೂರು ಪಿಎಸ್ಐ ಸಜಿತ್ ಕುಮಾರ್ ಮತ್ತು ಸಿಬ್ಬಂದಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. </p>.<p>ಸ್ಥಳಕ್ಕೆ ಡಿವೈಎಸ್ಪಿ ಹಾಲಮೂರ್ತಿ ರಾವ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಭೇಟಿ ನೀಡಿ ಪರಿಶೀಲಿಸಿದರು. ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಯ ಎಂಜಿನಿಯರ್ಗಳು ಸ್ಥಳಕ್ಕೆ ಬಂದು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲಿಯವರೆಗೆಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀರೂರು/ಕಡೂರು:</strong> ಬೀರೂರಿನಿಂದ ಲಿಂಗದಹಳ್ಳಿಗೆ ಹೋಗುವ ರಸ್ತೆಯ ತಿರುವಲ್ಲಿ ಮಂಗಳವಾರ ಸಂಜೆ ಎಚ್.ಪಿ.ಕಂಪನಿಯ ಗ್ಯಾಸ್ ಟ್ಯಾಂಕರ್ ಉರುಳಿಬಿದ್ದು ಆತಂಕಕ್ಕೆ ಕಾರಣವಾಯಿತು. </p>.<p>ಸಂಜೆ ಆರು ಗಂಟೆ ಸುಮಾರಿಗೆ ರಸ್ತೆ ತಿರುವಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಉರುಳಿದೆ. ಟ್ಯಾಂಕರ್ನಿಂದ ಅನಿಲ ಸೋರಿಕೆ ಆಗುತ್ತಿದ್ದು, ಸ್ಥಳದಲ್ಲಿ ಅಗ್ನಿ ಶಾಮಕ, ಮೆಸ್ಕಾಂ ಸಿಬ್ಬಂದಿ ಬಿಟ್ಟಿದ್ದಾರೆ. ಆ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಬೀರೂರು ಪಿಎಸ್ಐ ಸಜಿತ್ ಕುಮಾರ್ ಮತ್ತು ಸಿಬ್ಬಂದಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. </p>.<p>ಸ್ಥಳಕ್ಕೆ ಡಿವೈಎಸ್ಪಿ ಹಾಲಮೂರ್ತಿ ರಾವ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮಾ ಭೇಟಿ ನೀಡಿ ಪರಿಶೀಲಿಸಿದರು. ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಯ ಎಂಜಿನಿಯರ್ಗಳು ಸ್ಥಳಕ್ಕೆ ಬಂದು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಅಲ್ಲಿಯವರೆಗೆಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>