<p>ಚಿಕ್ಕಮಗಳೂರು: 17 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರದ ಎ.ಆರ್.ಗುರುಮೂರ್ತಿ ಅಲಿಯಾಸ್ ಗೊಂಬೆ ಎಂಬಾತಗೆ 20 ವರ್ಷ ಕಠಿಣ ಸಜೆ, ₹ 50 ಸಾವಿರ ದಂಡವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ (ಎಫ್ಟಿಎಸ್ಸಿ– ಪೊಕ್ಸೊ) ವಿಧಿಸಿ ಆದೇಶಿಸಿದೆ.</p>.<p>ನ್ಯಾಯಾಧೀಶರಾದ ವಿನುತಾ ಪಿ. ಶೆಟ್ಟಿ ಈ ಆದೇಶ ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ ದಂಡದ ಮೊತ್ತ ₹ 50 ಸಾವಿರ, ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಪರಿಹಾರ ಧನ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಏನಿದು ಪ್ರಕರಣ: 2019ರ ಜೂನ್ 7ರಂದು ಪ್ರಕರಣ ನಡೆದಿತ್ತು. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೋಲಿಸ್ ಠಾಣಾ ವ್ಯಾಪ್ತಿಯ ಗ್ರಾಮದ ಬಾಲಕಿಯು ಅಜ್ಜನ ಮನೆಗೆ ಬಂದಿದ್ದಾಗ ಗುರುಮೂರ್ತಿ ಪರಿಚಯಿಸಿಕೊಂಡಿದ್ದ. ಇಬ್ಬರೂ ಫೋನ್ನಲ್ಲಿ ಸಂಪರ್ಕದಲ್ಲಿದ್ದರು.</p>.<p>ಮದುವೆಯಾಗುವುದಾಗಿ ಬಾಲಕಿಯನ್ನು ಗುರುಮೂರ್ತಿ ಪುಸಲಾಯಿಸಿದ್ದ. ಬಾಲಕಿಯ ಊರಿಗೆ ಹೋಗಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಅತ್ಯಾಚಾರ ಎಸಗಿದ್ದ. ವಿಚಾರವನ್ನು ಯಾರಿಗೂ ತಿಳಿಸದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ.</p>.<p>ಬಾಲಕಿ ಗರ್ಭಿಣಿಯಾಗಿರುವುದು ತಾಯಿಗೆ ಗೊತ್ತಾಗಿದೆ. ಆಗ ಬಾಲಕಿ ನಡೆದ ಸಂಗತಿಯನ್ನು ತಾಯಿಗೆ ತಿಳಿಸಿದ್ದಾರೆ.</p>.<p>ಬಾಲಕಿಯ ತಾಯಿ ಗುರುಮೂರ್ತಿಯನ್ನು ವಿಚಾರಿಸಿದಾಗ ಆತ ನಿರಾಕರಿಸಿದ್ದ. 2020ರ ಫೆ. 2ರಂದು ಬಣಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಇನ್ಸ್ಪೆಕ್ಟರ್ ಎಚ್.ಎಂ.ಜಗನ್ನಾಥ್ ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪೊಕ್ಸೊ ಕೋರ್ಟ್ನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಚ್.ಶ್ರೀಹರ್ಷ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: 17 ವರ್ಷದ ಬಾಲಕಿಯ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರದ ಎ.ಆರ್.ಗುರುಮೂರ್ತಿ ಅಲಿಯಾಸ್ ಗೊಂಬೆ ಎಂಬಾತಗೆ 20 ವರ್ಷ ಕಠಿಣ ಸಜೆ, ₹ 50 ಸಾವಿರ ದಂಡವನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ (ಎಫ್ಟಿಎಸ್ಸಿ– ಪೊಕ್ಸೊ) ವಿಧಿಸಿ ಆದೇಶಿಸಿದೆ.</p>.<p>ನ್ಯಾಯಾಧೀಶರಾದ ವಿನುತಾ ಪಿ. ಶೆಟ್ಟಿ ಈ ಆದೇಶ ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ ದಂಡದ ಮೊತ್ತ ₹ 50 ಸಾವಿರ, ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಪರಿಹಾರ ಧನ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಏನಿದು ಪ್ರಕರಣ: 2019ರ ಜೂನ್ 7ರಂದು ಪ್ರಕರಣ ನಡೆದಿತ್ತು. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೋಲಿಸ್ ಠಾಣಾ ವ್ಯಾಪ್ತಿಯ ಗ್ರಾಮದ ಬಾಲಕಿಯು ಅಜ್ಜನ ಮನೆಗೆ ಬಂದಿದ್ದಾಗ ಗುರುಮೂರ್ತಿ ಪರಿಚಯಿಸಿಕೊಂಡಿದ್ದ. ಇಬ್ಬರೂ ಫೋನ್ನಲ್ಲಿ ಸಂಪರ್ಕದಲ್ಲಿದ್ದರು.</p>.<p>ಮದುವೆಯಾಗುವುದಾಗಿ ಬಾಲಕಿಯನ್ನು ಗುರುಮೂರ್ತಿ ಪುಸಲಾಯಿಸಿದ್ದ. ಬಾಲಕಿಯ ಊರಿಗೆ ಹೋಗಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಅತ್ಯಾಚಾರ ಎಸಗಿದ್ದ. ವಿಚಾರವನ್ನು ಯಾರಿಗೂ ತಿಳಿಸದಂತೆ ಬಾಲಕಿಗೆ ಬೆದರಿಕೆ ಹಾಕಿದ್ದ.</p>.<p>ಬಾಲಕಿ ಗರ್ಭಿಣಿಯಾಗಿರುವುದು ತಾಯಿಗೆ ಗೊತ್ತಾಗಿದೆ. ಆಗ ಬಾಲಕಿ ನಡೆದ ಸಂಗತಿಯನ್ನು ತಾಯಿಗೆ ತಿಳಿಸಿದ್ದಾರೆ.</p>.<p>ಬಾಲಕಿಯ ತಾಯಿ ಗುರುಮೂರ್ತಿಯನ್ನು ವಿಚಾರಿಸಿದಾಗ ಆತ ನಿರಾಕರಿಸಿದ್ದ. 2020ರ ಫೆ. 2ರಂದು ಬಣಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸ್ ಇನ್ಸ್ಪೆಕ್ಟರ್ ಎಚ್.ಎಂ.ಜಗನ್ನಾಥ್ ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪೊಕ್ಸೊ ಕೋರ್ಟ್ನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎಚ್.ಶ್ರೀಹರ್ಷ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>