ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತರಿಂದಲೇ ‘ಶೋಭಾ ಗೋ ಬ್ಯಾಕ್’ ಘೋಷಣೆ

Published : 10 ಮಾರ್ಚ್ 2024, 23:37 IST
Last Updated : 10 ಮಾರ್ಚ್ 2024, 23:37 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಯಾದಾಗ ಕೇಂದ್ರ ಕೃಷಿ ಖಾತೆ ಸಚಿವೆಯಾಗಿ ಒಮ್ಮೆಯೂ ಭೇಟಿ ಮಾಡಿ ಪರಿಹಾರ ನೀಡಲಿಲ್ಲ. ಪಕ್ಷದ ಕಾರ್ಯಕರ್ತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಬಿಜೆಪಿ 28 ಕ್ಷೇತ್ರಗಳಲ್ಲಿ ಗೆಲುತ್ತದೆ ಎಂದು ಭವಿಷ್ಯ ಹೇಳುತ್ತಿದ್ದಾರೆ. ಆದರೆ ಶೋಭಾಗೆ ಈ ಕ್ಷೇತ್ರದ ಟಿಕೆಟ್ ನೀಡಿದಲ್ಲಿ ಸೋಲು ನಿಶ್ಚಿತ.
-ಅನಿಲ್‍ಕುಮಾರ್ ಬಿಜೆಪಿ ಮುಖಂಡ
‘ಮೋದಿ ಮತ್ತೆ ಪ್ರಧಾನಿಯಾಗುವುದೇ ಗುರಿ’
‘ಪಕ್ಷದ ಅಭ್ಯರ್ಥಿ ಆದರೂ ನರೇಂದ್ರ ಮೋದಿಯವರೇ ಅಭ್ಯರ್ಥಿ ಎಂದುಕೊಂಡು ಕಾರ್ಯಕರ್ತರು ಕೆಲಸ ಮಾಡಬೇಕು. ನಮ್ಮ ವೈಮನಸ್ಸು ದೇಶಕ್ಕೆ ಆಪತ್ತು ತರಬಾರದು’ ಎಂದು ಬಿಜೆಪಿ ಮುಖಂಡ ಸಿ.ಟಿ ರವಿ ಹೇಳಿದರು. ‘ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ನಮ್ಮ ಗುರಿ. ಕಾರ್ಯಕರ್ತರಿಗೆ ಚುನಾವಣೆಗೆ ಸಂಬಂಧಿಸಿ ಭಾವನೆ ವ್ಯಕ್ತಪಡಿಸಲು ವೇದಿಕೆ ಕಲ್ಪಿಸಲಾಗಿತ್ತು. ಪಕ್ಷದ ಆಂತರಿಕ ವಿಚಾರಗಳು ಸಾರ್ವಜನಿಕವಾಗಿ ಚರ್ಚೆ ಮಾಡುವುದು ಸರಿಯಲ್ಲ’ ಎಂದರು. ‘ರಾಷ್ಟ್ರ ಹಿತದ ರಾಜಕಾರಣ ಅಗತ್ಯವಿದೆ. ಬಿಜೆಪಿ ಗೆಲ್ಲಿಸಲು ಎಲ್ಲ ವಿಷಯ ಮರೆತು ಒಂದೇ ಧ್ವನಿಯಾಗಿ ಕೆಲಸ ಮಾಡಬೇಕು. ಜೆಡಿಎಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆಯಬೇಕು. ನಮ್ಮ ಪಕ್ಷದ ಒಡಕಿನ ಲಾಭ ಕಾಂಗ್ರೆಸ್‍ಗೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.
‘ನನ್ನ ಗ್ರಹಚಾರ ಸರಿ ಇರಲಿಲ್ಲ ಸೋತೆ’
‘ನನ್ನ ಸೋಲಿಗೆ ಮತ್ತೊಬ್ಬರನ್ನು ಬೊಟ್ಟು ಮಾಡಿ ತೋರಿಸುವುದು ಸರಿಯಲ್ಲ. ಗೆಲ್ಲುವ ಅತಿಯಾದ ವಿಶ್ವಾಸವಿತ್ತು ನನ್ನ ಗ್ರಹಚಾರ ಸರಿ ಇರಲಿಲ್ಲ ಸೋತೆ’ ಎಂದು ಸಿ.ಟಿ.ರವಿ ಹೇಳಿದರು. ಚುನಾವಣೆಯಲ್ಜಿ ಬಿಜೆಪಿ ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸಮುದಾಯ ಭವನ ಹೆದ್ದಾರಿ ನಿರ್ಮಾಣ ಸೇರಿ ಅಭಿವೃದ್ಧಿ ಕೆಲಸ ಮಾಡಿದ್ದೆ. ಜನ ಗೆಲ್ಲಿಸುತ್ತಾರೆಂದು ನಂಬಿದ್ದೆ. ಅದೇ ಸೋಲಿಗೆ ಕಾರಣವಾಯಿತು’ ಎಂದರು. ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದಲ್ಲಿ ಅವರ ಕರ್ಮವನ್ನು ಅವರೇ ಅನುಭವಿಸಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT