<p><strong>ಚಿಕ್ಕಮಗಳೂರು</strong>: ‘ತಾಲ್ಲೂಕಿನ ಇಂದಾವರ ಭಾಗದಲ್ಲಿ ವಸತಿ ಬಡಾವಣೆ ನಿರ್ಮಾಣ ನಿಟ್ಟಿನಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿದ್ದು, ಉತ್ತಮ ಸಕರಾತ್ಮಕ ಸ್ಪಂದನೆ ವ್ಯಕ್ತವಾಗಿದೆ’ ಎಂದು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಅಧ್ಯಕ್ಷ ಆನಂದ್ ತಿಳಿಸಿದರು.</p>.<p>‘ಪ್ರಜಾವಾಣಿ’ಯೊಂದಿಗೆ ಅವರು ಮಾತನಾಡಿ, ‘ಇಂದಾವರದಲ್ಲಿ ಶುಕ್ರವಾರ ರೈತರೊಂದಿಗೆ ಸಭೆ ನಡೆಯಿತು. ವಸತಿ ಬಡಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲಾಯಿತು. ರೈತರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು’ ಎಂದು ತಿಳಿಸಿದರು.</p>.<p>‘ಜಮೀನು ನೀಡಲು ಹಲವು ರೈತರು ಒಲವು ತೋರಿದ್ದಾರೆ. ಸುಮಾರು 250 ಎಕರೆ ಸಿಗಬಹುದು ಎಂದು ಅಂದಾಜಿಸಲಾಗಿದೆ. ಶೀಘ್ರದಲ್ಲಿ ಸಿಡಿಎ ಸಭೆ ನಿಗದಿಪಡಿಸಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಇಂದಾವರ ಗ್ರಾಮದವರೇ ಸಭೆ ಏರ್ಪಾಡಿಸಿದ್ದರು. ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲರಿಂದ ಒಪ್ಪಿಗೆ ವ್ಯಕ್ತವಾದರೆ ಮುಂದಿನ ಹೆಜ್ಜೆ ಇಡಲಾಗುವುದು’ ಎಂದು ಸಿಡಿಎ ಆಯುಕ್ತ ಬಿ.ಸಿ.ಬಸವರಾಜು ತಿಳಿಸಿದರು.</p>.<p>‘ಕಾಫಿ, ಅಡಿಕೆ, ಸಿಲ್ವರ್ ಸಹಿತ ಎಲ್ಲ ಗಿಡ, ಬೆಳೆ, ಜಾಗಕ್ಕೆ ತಕ್ಕ ಪರಿಹಾರ ಒದಗಿಸಬೇಕು. ರೈತರಿಗೆ ಅನುಕೂಲ ಕಲ್ಪಿಸುವಂತೆ ಬೇಡಿಕೆ ಇಟ್ಟಿದ್ದೇವೆ ಎಂದು ಗ್ರಾಮಸ್ಥ ಯತೀಶ್ ತಿಳಿಸಿದರು.</p>.<p>ಸಿಡಿಎ ಸದಸ್ಯರಾದ ಲೋಕೇಶ್, ವಿರೂಪಾಕ್ಷ, ಗ್ರಾಮಸ್ಥರಾದ ಲೋಕೇಶ್, ರೇವಣ್ಣಗೌಡ ,ಚಂದ್ರಶೇಖರ್, ಸುರೇಶ್, ಪೂರ್ಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ತಾಲ್ಲೂಕಿನ ಇಂದಾವರ ಭಾಗದಲ್ಲಿ ವಸತಿ ಬಡಾವಣೆ ನಿರ್ಮಾಣ ನಿಟ್ಟಿನಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿದ್ದು, ಉತ್ತಮ ಸಕರಾತ್ಮಕ ಸ್ಪಂದನೆ ವ್ಯಕ್ತವಾಗಿದೆ’ ಎಂದು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಅಧ್ಯಕ್ಷ ಆನಂದ್ ತಿಳಿಸಿದರು.</p>.<p>‘ಪ್ರಜಾವಾಣಿ’ಯೊಂದಿಗೆ ಅವರು ಮಾತನಾಡಿ, ‘ಇಂದಾವರದಲ್ಲಿ ಶುಕ್ರವಾರ ರೈತರೊಂದಿಗೆ ಸಭೆ ನಡೆಯಿತು. ವಸತಿ ಬಡಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲಾಯಿತು. ರೈತರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು’ ಎಂದು ತಿಳಿಸಿದರು.</p>.<p>‘ಜಮೀನು ನೀಡಲು ಹಲವು ರೈತರು ಒಲವು ತೋರಿದ್ದಾರೆ. ಸುಮಾರು 250 ಎಕರೆ ಸಿಗಬಹುದು ಎಂದು ಅಂದಾಜಿಸಲಾಗಿದೆ. ಶೀಘ್ರದಲ್ಲಿ ಸಿಡಿಎ ಸಭೆ ನಿಗದಿಪಡಿಸಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>‘ಇಂದಾವರ ಗ್ರಾಮದವರೇ ಸಭೆ ಏರ್ಪಾಡಿಸಿದ್ದರು. ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲರಿಂದ ಒಪ್ಪಿಗೆ ವ್ಯಕ್ತವಾದರೆ ಮುಂದಿನ ಹೆಜ್ಜೆ ಇಡಲಾಗುವುದು’ ಎಂದು ಸಿಡಿಎ ಆಯುಕ್ತ ಬಿ.ಸಿ.ಬಸವರಾಜು ತಿಳಿಸಿದರು.</p>.<p>‘ಕಾಫಿ, ಅಡಿಕೆ, ಸಿಲ್ವರ್ ಸಹಿತ ಎಲ್ಲ ಗಿಡ, ಬೆಳೆ, ಜಾಗಕ್ಕೆ ತಕ್ಕ ಪರಿಹಾರ ಒದಗಿಸಬೇಕು. ರೈತರಿಗೆ ಅನುಕೂಲ ಕಲ್ಪಿಸುವಂತೆ ಬೇಡಿಕೆ ಇಟ್ಟಿದ್ದೇವೆ ಎಂದು ಗ್ರಾಮಸ್ಥ ಯತೀಶ್ ತಿಳಿಸಿದರು.</p>.<p>ಸಿಡಿಎ ಸದಸ್ಯರಾದ ಲೋಕೇಶ್, ವಿರೂಪಾಕ್ಷ, ಗ್ರಾಮಸ್ಥರಾದ ಲೋಕೇಶ್, ರೇವಣ್ಣಗೌಡ ,ಚಂದ್ರಶೇಖರ್, ಸುರೇಶ್, ಪೂರ್ಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>