<p><strong>ಬಾಳೆಹೊನ್ನೂರು</strong>: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ಸವಿನೆನಪಿಗಾಗಿ, ಇಲ್ಲಿನ ಕಾಮಧೇನು ಗೋ ಸೇವಾ ಟ್ರಸ್ಟ್ ವತಿಯಿಂದ ನೂತನ ಗೋಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ’ ಎಂದು ಟ್ರಸ್ಟ್ ಮುಖ್ಯಸ್ಥ ನಾಗೇಶ್ ಆಂಗೀರಸ ಹೇಳಿದರು. </p>.<p>ದೇವಗೋಡು ಗ್ರಾಮದ ಕೆಮ್ಮಣ್ಣು-ನೀರ್ಕಟ್ಟುವಿನಲ್ಲಿ ಗೋ ಶಾಲೆಯ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಭಾರತದ ಇನ್ನೊಂದು ಮುಖ ಗೋವು. ಗೋವು ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ.ದೇಸಿ ಗೋವುಗಳನ್ನು ಮತ್ತು ಹಿಂದೂ ಧರ್ಮದ ತಳ ಸಮುದಾಯ, ನಿರ್ಲಕ್ಷಿತ ಸಮುದಾಯಗಳನ್ನು ಗುರುತಿಸುವ ಕೆಲಸವಾಗಬೇಕಿದೆ’ ಎಂದರು.</p>.<p>ಹಿಂದುಳಿದ, ತಳ ಸಮುದಾಯಗಳ ಮುಖಂಡರಾದ ಅಪ್ಪಿ ಪೂಜಾರ್ತಿ, ಕಿಟ್ಟಿನಾಯ್ಕ, ಗೋಪಾಲಯ್ಯ ಶಂಕರಕೊಡಿಗೆ, ದೇವಪ್ಪ ಆಚಾರ್, ಗೋಪಾಲಯ್ಯ ಮುಜೇಖಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಗೋ ಶಾಲೆಯ ಮುಖ್ಯಸ್ಥರಾದ ಸುಮಾ ನಾಗೇಶ್, ಶ್ರೀರಾಮ್ ಆಂಗೀರಸ, ಗ್ರಾಪಂ ಸದಸ್ಯೆ ಅನುಪಮಾ, ಪ್ರಮುಖರಾದ ಕೆ.ವಿ.ದಿನೇಶ್ ಚಂದ್ರಗಿರಿ, ಲಕ್ಷ್ಮೀನಾರಾಯಣ, ಗೋಪಾಲಕೃಷ್ಣ, ನೀರ್ಕಟ್ಟು ಹರೀಶ್, ಶ್ಯಾಮ ಮೇಸ್ತ್ರಿ, ಸರೋಜಾ, ಕೃಷ್ಣಮೂರ್ತಿ, ಪ್ರಶಾಂತ್, ನಯನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು</strong>: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆಯ ಸವಿನೆನಪಿಗಾಗಿ, ಇಲ್ಲಿನ ಕಾಮಧೇನು ಗೋ ಸೇವಾ ಟ್ರಸ್ಟ್ ವತಿಯಿಂದ ನೂತನ ಗೋಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ’ ಎಂದು ಟ್ರಸ್ಟ್ ಮುಖ್ಯಸ್ಥ ನಾಗೇಶ್ ಆಂಗೀರಸ ಹೇಳಿದರು. </p>.<p>ದೇವಗೋಡು ಗ್ರಾಮದ ಕೆಮ್ಮಣ್ಣು-ನೀರ್ಕಟ್ಟುವಿನಲ್ಲಿ ಗೋ ಶಾಲೆಯ ನೂತನ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಭಾರತದ ಇನ್ನೊಂದು ಮುಖ ಗೋವು. ಗೋವು ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ.ದೇಸಿ ಗೋವುಗಳನ್ನು ಮತ್ತು ಹಿಂದೂ ಧರ್ಮದ ತಳ ಸಮುದಾಯ, ನಿರ್ಲಕ್ಷಿತ ಸಮುದಾಯಗಳನ್ನು ಗುರುತಿಸುವ ಕೆಲಸವಾಗಬೇಕಿದೆ’ ಎಂದರು.</p>.<p>ಹಿಂದುಳಿದ, ತಳ ಸಮುದಾಯಗಳ ಮುಖಂಡರಾದ ಅಪ್ಪಿ ಪೂಜಾರ್ತಿ, ಕಿಟ್ಟಿನಾಯ್ಕ, ಗೋಪಾಲಯ್ಯ ಶಂಕರಕೊಡಿಗೆ, ದೇವಪ್ಪ ಆಚಾರ್, ಗೋಪಾಲಯ್ಯ ಮುಜೇಖಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಗೋ ಶಾಲೆಯ ಮುಖ್ಯಸ್ಥರಾದ ಸುಮಾ ನಾಗೇಶ್, ಶ್ರೀರಾಮ್ ಆಂಗೀರಸ, ಗ್ರಾಪಂ ಸದಸ್ಯೆ ಅನುಪಮಾ, ಪ್ರಮುಖರಾದ ಕೆ.ವಿ.ದಿನೇಶ್ ಚಂದ್ರಗಿರಿ, ಲಕ್ಷ್ಮೀನಾರಾಯಣ, ಗೋಪಾಲಕೃಷ್ಣ, ನೀರ್ಕಟ್ಟು ಹರೀಶ್, ಶ್ಯಾಮ ಮೇಸ್ತ್ರಿ, ಸರೋಜಾ, ಕೃಷ್ಣಮೂರ್ತಿ, ಪ್ರಶಾಂತ್, ನಯನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>