ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಕಡೂರು ತಾಲ್ಲೂಕಿನಲ್ಲಿ ಸರ್ಕಾರಿ ಗೋಶಾಲೆ ಆರಂಭ

Last Updated 27 ಜೂನ್ 2022, 8:43 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ ಗೋಶಾಲೆ ಆರಂಭಿಸಲಾಗಿದೆ.

ಜಿಲ್ಲೆಗೊಂದು ಸರ್ಕಾರಿ ಗೋಶಾಲೆ ಯೋಜನೆಯಡಿ ರಾಜ್ಯದಲ್ಲಿ ನಿರ್ಮಿಸಿರುವ ಮೊದಲ ಗೋಶಾಲೆ ಇದು ಎಂದು ಪಶುಪಾಲನೆ ಇಲಾಖೆ ಜಿಲ್ಲಾ ಉಪನಿರ್ದೇಶಕ ಡಾ.ಪ್ರಕಾಶ್ 'ಪ್ರಜಾವಾಣಿ'ಗೆ ತಿಳಿಸಿದರು.

ಗ್ರಾಮದ ಸರ್ವೆ ನಂಬರ್ 70ರಲ್ಲಿ 11 ಎಕರೆ ಗೋಶಾಲೆ ಜಾಗ ಇದೆ. 2 ಎಕರೆ ಜಾಗದಲ್ಲಿ ಮೇವು ದಾಸ್ತಾನು ಕೊಠಡಿ, ಕಚೇರಿ, ಜಾನುವಾರುಗಳ ಶೆಡ್, ಸುತ್ತ ಕಾಂಪೌಂಡ್ ನಿರ್ಮಿಸಲಾಗಿದೆ. ಬಾಕಿ 9 ಎಕರೆ ಮೇವು ಬೆಳೆಯುವ ಜಾಗ.ಗೋಶಾಲೆಯಲ್ಲಿ 150 ರಾಸುಗಳ ನಿರ್ವಹೆಣೆಗೆ ವ್ಯವಸ್ಥೆ ಇದೆ.

ಗೋಶಾಲೆ ನಿರ್ಮಾಣಕ್ಕೆ ₹ 53.5 ಲಕ್ಷ ಮಂಜೂರಾಗಿದ್ದು,₹ 41.5 ಲಕ್ಷ ವೆಚ್ಚದಲ್ಲಿ ಗೋಶಾಲೆ ನಿರ್ಮಿಸಲಾಗಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಅವರು ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT