ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಜಾಗ ಅಕ್ರಮ ಮಂಜೂರಾತಿ ಪ್ರಕರಣ: ಆರೋಪಿಗಳ ಪತ್ತೆಗೆ ಶೋಧ

Last Updated 21 ಜೂನ್ 2022, 4:43 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರಿನಲ್ಲಿ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮ ಮಂಜೂರಾತಿಗೆ ಸಂಬಂಧಿಸಿದಂತೆ ಎಫ್‌ಡಿಎ ಎಚ್‌.ಸಿ.ಮಹೇಶ್‌, ಗ್ರಾಮ ಲೆಕ್ಕಿಗರಾದ ಎನ್‌.ಎನ್‌.ಗಿರೀಶ್‌, ಬಿ.ವೈ.ಗೀತಾ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಮೂವರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಬಾಳೂರಿನ ಸರ್ವೆ ನಂಬರ್‌ 168ರಲ್ಲಿ ಗೋಮಾಳ ಜಾಗವನ್ನು ತಲಾ 4.38ಎಕರೆಯಂತೆ 11 ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

‘ಆರೋಪಿಗಳ ಪತ್ತೆ ನಿಟ್ಟಿನಲ್ಲಿ ಶೋಧ ಶುರುವಾಗಿದೆ. ತಂಡ ವಿವಿಧೆಡೆಗೆ ತೆರಳಿ ತಲಾಶ್‌ ನಡೆಸಿದೆ. ಶೀಘ್ರದಲ್ಲಿ
ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ.ಹಾಕೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಹಶೀಲ್ದಾರ್‌ ಎಂ.ಎ.ನಾಗರಾಜ್‌ ಅವರು ಮೂಡಿಗೆರೆ ಠಾಣೆಯಲ್ಲಿ ಮೂವರ ವಿರುದ್ಧ ದಾಖಲಿಸಿದ್ದಾರೆ. ಐಪಿಸಿ 409 (ಸರ್ಕಾರಿ ನೌಕರನಿಂದ ನಂಬಿಕೆ ದ್ರೋಹ), 34 ಅಪರಾಧ ಸಂಚು, ಕರ್ನಾಟಕ ಭೂಕಂದಾಯ ಕಾಯ್ದೆ–2007ನಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT