<p><strong>ಚಿಕ್ಕಮಗಳೂರು:</strong> ಜಿಲ್ಲೆಯ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಪಂಚ ಗ್ಯಾರಂಟಿಯ ಯೋಜನೆಗಳ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು. </p>.<p>ಶಕ್ತಿ ಯೋಜನೆಯಡಿ ಚಿಕ್ಕಮಗಳೂರು, ಕಡೂರು ಹಾಗೂ ಮೂಡಿಗೆರೆ ಘಟಕಗಳ ಬಸ್ಗಳಲ್ಲಿಈವರೆಗೆ 5.48 ಕೋಟಿ ಟ್ರಿಪ್ಗಳಲ್ಲಿ ಮಹಿಳೆಯರು ಪ್ರಯಾಣ ಮಾಡಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ₹216 ಕೋಟಿ ವ್ಯಯಿಸಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯ 2,44,353 ಪಡಿತರ ಚೀಟಿಗಳ 8,05,042 ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ₹226 ಕೋಟಿ ನೇರ ನಗದು ವರ್ಗಾವಣೆ ಮಾಡಲಾಗಿದೆ. 2025ರ ಫೆಬ್ರುವರಿಯಿಂದ ತಲಾ 5 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದ್ದು, ಇದಕ್ಕಾಗಿ ₹99 ಕೋಟಿ ಸೇರಿ ಒಟ್ಟಾರೆ ₹325 ಕೋಟಿ ವೆಚ್ಚ ಮಾಡಲಾಗಿದೆ ಎಂದರು.</p>.<p>ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,06,735 ಆರ್ಆರ್ ಸಂಖ್ಯೆಗಳ (ಕನಿಷ್ಠ 10 ಲಕ್ಷ ಫಲಾನುಭವಿಗಳು) ವಿದ್ಯುತ್ ಬಿಲ್ಗಳನ್ನು ಸರ್ಕಾರ ಭರಿಸುತ್ತಿದೆ. ಇದಕ್ಕಾಗಿ ಈವರೆಗೆ ₹ 304 ಕೋಟಿ ವ್ಯಯಿಸಿದೆ ಎಂದು ವಿವರಿಸಿದರು.</p>.<p>ಗೃಹಲಕ್ಷ್ಮಿ ಯೋಜನೆಯ ಮೂಲಕ ಜಿಲ್ಲೆಯ 2,62,862 ಯಜಮಾನಿಯರಿಗೆ ತಿಂಗಳಿಗೆ ₹2 ಸಾವಿರ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಈವರೆಗೆ 24 ಕಂತುಗಳಲ್ಲಿ ಒಟ್ಟು ₹1,261 ಕೋಟಿ ನೀಡಲಾಗಿದೆ ಎಂದು ತಿಳಿಸಿದರು.</p>.<p>ಯುವನಿಧಿ ಯೋಜನೆಯಲ್ಲಿ ಈವರೆಗೆ ಜಿಲ್ಲೆಯ 5,161 ಪದವಿಧರರು 59 ಡಿಪ್ಲೊಮಾ ಪದವೀಧರರಿಗಾಗಿ ₹13 ಕೋಟಿಯನ್ನು ಸರ್ಕಾರ ಭರಿಸಿದೆ. ಒಟ್ಟಾರೆ ಜಿಲ್ಲೆಯಲ್ಲಿ ಈ ಕಾರ್ಯಕ್ರಮಗಳಿಗಾಗಿ ₹2,110 ಕೋಟಿಯನ್ನು ವ್ಯಯಿಸಲಾಗಿದೆ ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಮಂಜುನಾಥ್, ಚಂದ್ರಮೌಳಿ, ತಾಲ್ಲೂಕು ಸಮಿತಿ ಅಧ್ಯಕ್ಷ ಮಲ್ಲೇಶಸ್ವಾಮಿ, ಬಸವರಾಜ್, ಅನ್ಸಾರ್ ಅಲಿ, ನಾಗೇಶ್ ರಾಜ್ ಅರಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಪಂಚ ಗ್ಯಾರಂಟಿಯ ಯೋಜನೆಗಳ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು. </p>.<p>ಶಕ್ತಿ ಯೋಜನೆಯಡಿ ಚಿಕ್ಕಮಗಳೂರು, ಕಡೂರು ಹಾಗೂ ಮೂಡಿಗೆರೆ ಘಟಕಗಳ ಬಸ್ಗಳಲ್ಲಿಈವರೆಗೆ 5.48 ಕೋಟಿ ಟ್ರಿಪ್ಗಳಲ್ಲಿ ಮಹಿಳೆಯರು ಪ್ರಯಾಣ ಮಾಡಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ ₹216 ಕೋಟಿ ವ್ಯಯಿಸಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಜಿಲ್ಲೆಯ 2,44,353 ಪಡಿತರ ಚೀಟಿಗಳ 8,05,042 ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ₹226 ಕೋಟಿ ನೇರ ನಗದು ವರ್ಗಾವಣೆ ಮಾಡಲಾಗಿದೆ. 2025ರ ಫೆಬ್ರುವರಿಯಿಂದ ತಲಾ 5 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದ್ದು, ಇದಕ್ಕಾಗಿ ₹99 ಕೋಟಿ ಸೇರಿ ಒಟ್ಟಾರೆ ₹325 ಕೋಟಿ ವೆಚ್ಚ ಮಾಡಲಾಗಿದೆ ಎಂದರು.</p>.<p>ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ 3,06,735 ಆರ್ಆರ್ ಸಂಖ್ಯೆಗಳ (ಕನಿಷ್ಠ 10 ಲಕ್ಷ ಫಲಾನುಭವಿಗಳು) ವಿದ್ಯುತ್ ಬಿಲ್ಗಳನ್ನು ಸರ್ಕಾರ ಭರಿಸುತ್ತಿದೆ. ಇದಕ್ಕಾಗಿ ಈವರೆಗೆ ₹ 304 ಕೋಟಿ ವ್ಯಯಿಸಿದೆ ಎಂದು ವಿವರಿಸಿದರು.</p>.<p>ಗೃಹಲಕ್ಷ್ಮಿ ಯೋಜನೆಯ ಮೂಲಕ ಜಿಲ್ಲೆಯ 2,62,862 ಯಜಮಾನಿಯರಿಗೆ ತಿಂಗಳಿಗೆ ₹2 ಸಾವಿರ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಈವರೆಗೆ 24 ಕಂತುಗಳಲ್ಲಿ ಒಟ್ಟು ₹1,261 ಕೋಟಿ ನೀಡಲಾಗಿದೆ ಎಂದು ತಿಳಿಸಿದರು.</p>.<p>ಯುವನಿಧಿ ಯೋಜನೆಯಲ್ಲಿ ಈವರೆಗೆ ಜಿಲ್ಲೆಯ 5,161 ಪದವಿಧರರು 59 ಡಿಪ್ಲೊಮಾ ಪದವೀಧರರಿಗಾಗಿ ₹13 ಕೋಟಿಯನ್ನು ಸರ್ಕಾರ ಭರಿಸಿದೆ. ಒಟ್ಟಾರೆ ಜಿಲ್ಲೆಯಲ್ಲಿ ಈ ಕಾರ್ಯಕ್ರಮಗಳಿಗಾಗಿ ₹2,110 ಕೋಟಿಯನ್ನು ವ್ಯಯಿಸಲಾಗಿದೆ ಎಂದು ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಮಂಜುನಾಥ್, ಚಂದ್ರಮೌಳಿ, ತಾಲ್ಲೂಕು ಸಮಿತಿ ಅಧ್ಯಕ್ಷ ಮಲ್ಲೇಶಸ್ವಾಮಿ, ಬಸವರಾಜ್, ಅನ್ಸಾರ್ ಅಲಿ, ನಾಗೇಶ್ ರಾಜ್ ಅರಸ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>