<p><strong>ಕೊಪ್ಪ</strong>: ತಾಲ್ಲೂಕಿನ ಹರಿಹರಪುರ ಮಠದ ಲಕ್ಷ್ಮೀನರಸಿಂಹ ಸ್ವಾಮಿ, ಶಾರದಾ ಪರಮೇಶ್ವರಿ ದೇವಸ್ಥಾನದಲ್ಲಿ ಏ.15ರಂದು ನಡೆಯಲಿರುವ ಮಹಾಕುಂಭಾಭಿಷೇಕ ನಿಮಿತ್ತ ಏ.24ರ ವರೆಗೆ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಮಂಗಳವಾರ ನವಗ್ರಹ ಹೋಮ ಇತ್ಯಾದಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು.</p>.<p>ಬೆಳಿಗ್ಗೆ ನವಗ್ರಹ ಹೋಮ, ಪ್ರಾಕಾರ ಪರಿಗ್ರಹ, ಪ್ರಾಕಾರ ಶುದ್ಧಿ, ಕಲಶ ಪ್ರತಿಷ್ಠೆ, ಮಹಾಮಂಗಳಾರತಿ, ಅಷ್ಟಾವಧಾನ ಸೇವೆ, ಪ್ರಸಾದ ವಿನಿಯೋಗ ನಡೆಯಿತು. ಬಳಿಕ ಮಹಾ ಕುಂಭಾಭಿಷೇಕ ಮಹೋತ್ಸವದ ಪ್ರತಿಷ್ಠಾಂಗ ಪೂರ್ವ ವಿಧಿ, ಲಲಿತಾ ಹೋಮ, ಗಾಯತ್ರಿ ಮಹಾಯಾಗ ನಡೆಯಿತು.</p>.<p>ಮೂಡಿಗೆರೆ ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಮಠಕ್ಕೆ ಭೇಟಿ ನೀಡಿ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ ಭೇಟಿ ನೀಡಿದರು.</p>.<p>ಏ.13ರ ಬೆಳಿಗ್ಗೆ 8 ಗಂಟೆಗೆ ಜಲಾಧಿವಾಸ, ನೇತ್ರೋನ್ಮೀಲನ, ಅಧಿವಾಸಾದಿಗಳು, ಸಂಜೆ 4ಗಂಟೆಗೆ ಲಕ್ಷ್ಮೀನರಸಿಂಹ ಸ್ವಾಮಿಗೆ ಅಧಿವಾಸ ಹೋಮ, ತತ್ವನ್ಯಾಸ, ಕಲಾನ್ಯಾಸಗಳು, ಅಷ್ಟಾವಧಾನ ಸೇವೆ ಹಾಗೂ ಪ್ರತಿಷ್ಠಾಂಗ ಪೂರ್ವ ವಿಧಿಗಳು, ಸುದರ್ಶನ ನಾರಸಿಂಹ ಮಹಾಯಾಗ, ಸ್ವಯಂಪ್ರಕಾಶ ಅಭಿನವ ರಾಮಾನಂದ ಸರಸ್ವತಿ ಸ್ವಾಮೀಜಿಯವರ ಜಯಂತಿ ಶತಮಾನೋತ್ಸವದ ಕಾರ್ಯಕ್ರಮಗಳು ಜರುಗಲಿವೆ.</p>.<p>ಏ.13ರಂದು ಸಂಜೆ 5.30ಕ್ಕೆ ವಿದುಷಿ ಸಂಯುಕ್ತಾ ಶಂಕರ್ ಮತ್ತು ವೃಂದ ಸಚ್ಚಿದಾನಂದ ಆರ್ಟ್ ಫೌಂಡೇಷನ್ ಬೆಂಗಳೂರು ವತಿಯಿಂದ ‘ಹರಿಹರಪುರ ಸ್ಥಳ ಮಹಿಮೆ’ ಕುರಿತ ನೃತ್ಯ ರೂಪಕ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ</strong>: ತಾಲ್ಲೂಕಿನ ಹರಿಹರಪುರ ಮಠದ ಲಕ್ಷ್ಮೀನರಸಿಂಹ ಸ್ವಾಮಿ, ಶಾರದಾ ಪರಮೇಶ್ವರಿ ದೇವಸ್ಥಾನದಲ್ಲಿ ಏ.15ರಂದು ನಡೆಯಲಿರುವ ಮಹಾಕುಂಭಾಭಿಷೇಕ ನಿಮಿತ್ತ ಏ.24ರ ವರೆಗೆ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಮಂಗಳವಾರ ನವಗ್ರಹ ಹೋಮ ಇತ್ಯಾದಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು.</p>.<p>ಬೆಳಿಗ್ಗೆ ನವಗ್ರಹ ಹೋಮ, ಪ್ರಾಕಾರ ಪರಿಗ್ರಹ, ಪ್ರಾಕಾರ ಶುದ್ಧಿ, ಕಲಶ ಪ್ರತಿಷ್ಠೆ, ಮಹಾಮಂಗಳಾರತಿ, ಅಷ್ಟಾವಧಾನ ಸೇವೆ, ಪ್ರಸಾದ ವಿನಿಯೋಗ ನಡೆಯಿತು. ಬಳಿಕ ಮಹಾ ಕುಂಭಾಭಿಷೇಕ ಮಹೋತ್ಸವದ ಪ್ರತಿಷ್ಠಾಂಗ ಪೂರ್ವ ವಿಧಿ, ಲಲಿತಾ ಹೋಮ, ಗಾಯತ್ರಿ ಮಹಾಯಾಗ ನಡೆಯಿತು.</p>.<p>ಮೂಡಿಗೆರೆ ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಮಠಕ್ಕೆ ಭೇಟಿ ನೀಡಿ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ ಭೇಟಿ ನೀಡಿದರು.</p>.<p>ಏ.13ರ ಬೆಳಿಗ್ಗೆ 8 ಗಂಟೆಗೆ ಜಲಾಧಿವಾಸ, ನೇತ್ರೋನ್ಮೀಲನ, ಅಧಿವಾಸಾದಿಗಳು, ಸಂಜೆ 4ಗಂಟೆಗೆ ಲಕ್ಷ್ಮೀನರಸಿಂಹ ಸ್ವಾಮಿಗೆ ಅಧಿವಾಸ ಹೋಮ, ತತ್ವನ್ಯಾಸ, ಕಲಾನ್ಯಾಸಗಳು, ಅಷ್ಟಾವಧಾನ ಸೇವೆ ಹಾಗೂ ಪ್ರತಿಷ್ಠಾಂಗ ಪೂರ್ವ ವಿಧಿಗಳು, ಸುದರ್ಶನ ನಾರಸಿಂಹ ಮಹಾಯಾಗ, ಸ್ವಯಂಪ್ರಕಾಶ ಅಭಿನವ ರಾಮಾನಂದ ಸರಸ್ವತಿ ಸ್ವಾಮೀಜಿಯವರ ಜಯಂತಿ ಶತಮಾನೋತ್ಸವದ ಕಾರ್ಯಕ್ರಮಗಳು ಜರುಗಲಿವೆ.</p>.<p>ಏ.13ರಂದು ಸಂಜೆ 5.30ಕ್ಕೆ ವಿದುಷಿ ಸಂಯುಕ್ತಾ ಶಂಕರ್ ಮತ್ತು ವೃಂದ ಸಚ್ಚಿದಾನಂದ ಆರ್ಟ್ ಫೌಂಡೇಷನ್ ಬೆಂಗಳೂರು ವತಿಯಿಂದ ‘ಹರಿಹರಪುರ ಸ್ಥಳ ಮಹಿಮೆ’ ಕುರಿತ ನೃತ್ಯ ರೂಪಕ ಆಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>