‘ಕ್ರಿಶ್ಚಿಯನ್ನರು ಶಾಂತಿ, ಸಹಬಾಳ್ವೆ, ಸೌಹಾರ್ದ ಪ್ರಿಯರು. ದೇಶದಲ್ಲಿ ಶಿಕ್ಷಣ, ಸಮಾಜ ಸೇವೆ, ಆರೋಗ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ದೇಶದಲ್ಲಿ ಸೌಹಾರ್ದ ನೆಲೆಸಿದರೆ ಬಿಜೆಪಿ ಹಿಂದುತ್ವ ಹೆಸರಿನಲ್ಲಿ ರಾಜಕೀಯ ಮಾಡಲು ಸಾಧ್ಯವಾಗುವುದಿಲ್ಲ. ಕುಚೋದ್ಯದ ಹೇಳಿಕೆ ನೀಡಿರುವ ಈಶ್ವರಪ್ಪ ಅವರು ಹಾರ್ಪಿಕ್ ನಿಂದ ಬಾಯಿ ಸ್ವಚ್ಛ ಮಾಡಿಕೊಳ್ಳಬೇಕು. ಒಳ್ಳೆಯ ಮಾತುಗಳನ್ನು ಆಡಬೇಕು’ ಎಂದರು.