<p><strong>ಚಿಕ್ಕಮಗಳೂರು</strong>: ‘ಇನ್ನೇನು ಎಂಜಿನಿಯರಿಂಗ್ ಮುಗಿಸಿ ಬದುಕಿಗೆ ಆಧಾರವಾಗಲಿದ್ದಾನೆ ಎಂದು ಕನಸು ಕಂಡಿದ್ದೆವು. ಅಷ್ಟರಲ್ಲಿ ಈ ರೀತಿಯಾಗಿದೆ...’</p><p>ಹಾಸನದ ಮೊಸಳೆ ಹೊಸಹಳ್ಳಿಯಅಪಘಾತದಲ್ಲಿ ಮಗನನ್ನು ಕಳೆದುಕೊಂಡ ತಾಲ್ಲೂಕಿನ ಮಾಣೇನಹಳ್ಳಿ ಗ್ರಾಮದ ಪೋಷಕರು ಶನಿವಾರ ಕಣ್ಣೀರಿಟ್ಟರು. ಮಾಣೇನಹಳ್ಳಿಯ ರವೀಶ್–ಲತಾ ದಂಪತಿಯ ಹಿರಿಯ ಮಗ ಸುರೇಶ್ (19) ಅವಘಡದಲ್ಲಿ ಮೃತಪಟ್ಟಿದ್ದಾರೆ.</p><p>ಹಾಸನದ ಮಲ್ನಾಡ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುರೇಶ್, ಮೊಸಳೆ ಹೊಸಹಳ್ಳಿ ಸಮೀಪದ ವಸತಿನಿಲಯದಲ್ಲಿ ತಂಗಿದ್ದರು. ಶುಕ್ರವಾರ ಸಂಜೆ ಊಟದ ನಂತರ ಸ್ನೇಹಿತರ ಜತೆ ಗಣಪತಿ ವಿಸರ್ಜನೆ ಮೆರವಣಿಗೆ ನೋಡಲು ತೆರಳಿದ್ದರು.</p><p>ಮೃತದೇಹವನ್ನು ಶನಿವಾರ ಮಾಣೇನಹಳ್ಳಿಗೆ ತರಲಾಯಿತು. ಈ ವೇಳೆ ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು, ಸಂಬಂಧಿಕರ ಕಣ್ಣೀರಿನ ನಡುವೆ ಅಂತ್ಯಕ್ರಿಯೆ ನಡೆಯಿತು. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗ್ರಾಮಕ್ಕೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಇನ್ನೇನು ಎಂಜಿನಿಯರಿಂಗ್ ಮುಗಿಸಿ ಬದುಕಿಗೆ ಆಧಾರವಾಗಲಿದ್ದಾನೆ ಎಂದು ಕನಸು ಕಂಡಿದ್ದೆವು. ಅಷ್ಟರಲ್ಲಿ ಈ ರೀತಿಯಾಗಿದೆ...’</p><p>ಹಾಸನದ ಮೊಸಳೆ ಹೊಸಹಳ್ಳಿಯಅಪಘಾತದಲ್ಲಿ ಮಗನನ್ನು ಕಳೆದುಕೊಂಡ ತಾಲ್ಲೂಕಿನ ಮಾಣೇನಹಳ್ಳಿ ಗ್ರಾಮದ ಪೋಷಕರು ಶನಿವಾರ ಕಣ್ಣೀರಿಟ್ಟರು. ಮಾಣೇನಹಳ್ಳಿಯ ರವೀಶ್–ಲತಾ ದಂಪತಿಯ ಹಿರಿಯ ಮಗ ಸುರೇಶ್ (19) ಅವಘಡದಲ್ಲಿ ಮೃತಪಟ್ಟಿದ್ದಾರೆ.</p><p>ಹಾಸನದ ಮಲ್ನಾಡ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುರೇಶ್, ಮೊಸಳೆ ಹೊಸಹಳ್ಳಿ ಸಮೀಪದ ವಸತಿನಿಲಯದಲ್ಲಿ ತಂಗಿದ್ದರು. ಶುಕ್ರವಾರ ಸಂಜೆ ಊಟದ ನಂತರ ಸ್ನೇಹಿತರ ಜತೆ ಗಣಪತಿ ವಿಸರ್ಜನೆ ಮೆರವಣಿಗೆ ನೋಡಲು ತೆರಳಿದ್ದರು.</p><p>ಮೃತದೇಹವನ್ನು ಶನಿವಾರ ಮಾಣೇನಹಳ್ಳಿಗೆ ತರಲಾಯಿತು. ಈ ವೇಳೆ ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು. ಗ್ರಾಮಸ್ಥರು, ಸಂಬಂಧಿಕರ ಕಣ್ಣೀರಿನ ನಡುವೆ ಅಂತ್ಯಕ್ರಿಯೆ ನಡೆಯಿತು. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಗ್ರಾಮಕ್ಕೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>