ಕಡೂರು ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಿಕ್ಕಮಗಳೂರು ಜಿಲ್ಲೆಗೆ ಬಜೆಟ್ನಲ್ಲಿ ಅನ್ಯಾಯ ಮಾಡಲಾಗಿದೆ. ಜಿಲ್ಲೆಯ ಶಾಸಕರು 8 ಬೇಡಿಕೆಗಳನ್ನಿಟ್ಟಿದ್ದೆವು. ಕನಿಷ್ಠ 3 ಬೇಡಿಕೆಗಳನ್ನಾದರೂ ಈಡೇರಿಸುವ ಭರವಸೆಯಿತ್ತು. ಆದರೆ ಮುಖ್ಯಮಂತ್ರಿಗಳು ಜಿಲ್ಲೆಯನ್ನು ಮರೆತೇ ಬಿಟ್ಟಿರುವುದು ವಿಪರ್ಯಾಸ’ ಎಂದರು.