ಎಸ್ಟೇಟ್ನಲ್ಲಿ ಕಾಫಿ ಕೊಯ್ಲಿಗೆ ಮಧ್ಯಪ್ರದೇಶ ಮತ್ತು ಅಸ್ಸಾಂನಿಂದ ಕಾರ್ಮಿಕರು ಬಂದಿದ್ದರು. ಇವರಲ್ಲಿ ನಾಲ್ವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಹಾಗಾಗಿ, ರಕ್ತದ ಮಾದರಿಯನ್ನು ಶಿವಮೊಗ್ಗದ ಪರಿಮಾಣು ಕ್ರಿಮಿ ಪರಿಶೋಧನಾ ಪ್ರಯೋಗಾಲಯಕ್ಕೆ (ವಿಡಿಎಲ್) ಕಳುಹಿಸಲಾಗಿತ್ತು. ಆ ಪೈಕಿ ಮೂವರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ. ಈ ಪೈಕಿ ಮಧ್ಯಪ್ರದೇಶದಿಂದ ಬಂದಿದ್ದ ಇಬ್ಬರು ಸ್ಥಳೀಯವಾಗಿ ಚಿಕಿತ್ಸೆ ಪಡೆದು, ಹಿಂದುರುಗಿ ಹೋಗಿದ್ದಾರೆ. ಮತ್ತೊಬ್ಬರು ಅಸ್ಸಾಂ ಮೂಲದ ಮಹಿಳೆಯಾಗಿದ್ದು, ಅವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಶನಿವಾರ ಸಂಜೆ ಆಸ್ಪತ್ರೆ ಸಿಬ್ಬಂದಿ ತೆರಳಿದ್ದರು ಎಂದು ಮೂಲಗಳು ಖಚಿತ ಪಡಿಸಿವೆ.